ಲಾವತಡ್ಕ: ಹಿಟಾಚಿ ಸಾಗಾಟದ ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ

0

ಓರ್ವ ಪ್ರಯಾಣಿಕ ಸಾವು – 8ಕ್ಕೂ ಹೆಚ್ಚು ಜನರಿಗೆ ಗಾಯ

ನೆಲ್ಯಾಡಿ: ಹಿಟಾಚಿ ಸಾಗಾಟ ಮಾಡುತ್ತಿದ್ದ ಲಾರಿಗೆ ಖಾಸಗಿ ಬಸ್ಸು ಡಿಕ್ಕಿಯಾಗಿ ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟು 8 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪ, ಇಚ್ಲಂಪಾಡಿ ಗ್ರಾಮದ ಲಾವತ್ತಡ್ಕದಲ್ಲಿ ಜೂ.15ರಂದು ರಾತ್ರಿ 11.30ರ ವೇಳೆಗೆ ನಡೆದಿದೆ.


ಹಿಟಾಚಿಯನ್ನು ಲೋಡ್ ಮಾಡಿಕೊಂಡು ಸಾಗುತ್ತಿದ್ದ ಲಾರಿಗೆ ಕಾರ್ಕಳ ಧರ್ಮಸ್ಥಳ ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದ ಸುಗಮ ಹೆಸರಿನ ಖಾಸಗಿ ಬಸ್ ಹಿಂದಿನಿಂದ ಡಿಕ್ಕಿಯಾಗಿದೆ.

ಅಪಘಾತದ ಪರಿಣಾಮ ಬಸ್‌ನಲ್ಲಿದ್ದ ಕಾರ್ಕಳ ಪಡುಮನೆ ನಿವಾಸಿ ಶಂಕರ ನಾರಾಯಣ(41ವ.)ಎಂಬವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಕರೆದೊಯ್ಯುವ ದಾರಿಮಧ್ಯೆ ಮೃತಪಟ್ಟಿದ್ದಾರೆ. ಉಳಿದಂತೆ ಗಾಯಗೊಂಡಿರುವ ಬಸ್ಸಿನಲ್ಲಿದ್ದ 8ಕ್ಕೂ ಹೆಚ್ಚು ಪ್ರಯಾಣಿಕರು ಮಂಗಳೂರಿನ ಎ.ಜೆ.ಆಸ್ಪತ್ರೆ ಹಾಗೂ ಇಂಡಿಯಾನ್ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here