ನಿಡ್ಪಳ್ಳಿ: ನಾಪತ್ತೆಯಾಗಿದ್ದ ಕಾಟುಕುಕ್ಕೆ ದೇವಸ್ಯ ನಿವಾಸಿ ಕೃಷಿ ಕೂಲಿ ಕಾರ್ಮಿಕ ನಾರಾಯಣ ನಾಯ್ಕ (65 ವ) ಎಂಬವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪಾಣಾಜೆ ಗ್ರಾಮದ ಅರ್ಧಮೂಲೆ ಎಂಬಲ್ಲಿ ಗುಡ್ಡೆಯ ಮರವೊಂದರಲ್ಲಿ ಜೂ.16ರಂದು ಪತ್ತೆಯಾಗಿದೆ.
ಜೂ.13ರಂದು ಮನೆಯಿಂದ ಆರ್ಲಪದವಿಗೆ ಎಂದು ಹೊರಟು ಹೋದವರು ಬಳಿಕ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದರು. ಮನೆಯವರು ಹುಡುಕಾಟ ನಡೆಸಿದಾಗ ಪಾಣಾಜೆ ಗ್ರಾಮದ ಅರ್ಧಮೂಲೆ ಎಂಬಲ್ಲಿ ಗುಡ್ಡೆಯ ಮರವೊಂದರಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇವರು ಅಡಿಕೆ ತೆಗೆಯುವುದು, ಮದ್ದು ಸಿಂಪಡಿಸುವ ಕೆಲಸ ಮಾಡುತ್ತಿದ್ದರು.

ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದ್ದಾರೆ. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ವಾರಿಸುದಾರರಿಗೆ ಬಿಟ್ಟು ಕೊಡಲಾಯಿತು.
ಮೃತರು ಪತ್ನಿ ದೇವಕಿ, ಪುತ್ರರಾದ ಉದಯ, ರಾಧಾಕೃಷ್ಣ ಹಾಗೂ ಪುತ್ರಿಯರನ್ನು ಅಗಲಿದ್ದಾರೆ.