ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆಂಗ್ಲ ಮಾಧ್ಯಮ ವಿಭಾಗದ ಪ್ರಥಮ ಪೋಷಕರ ಸಭೆ

0

ಬಡಗನ್ನೂರು: ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ 2025-26ನೇ ಸಾಲಿನ ಪ್ರಥಮ ಪೋಷಕರ ಸಭೆಯು ನಡೆಯಿತು.


ಈ ಸಭೆಯ ಅಧ್ಯಕ್ಷತೆಯನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕ ವಿಘ್ನೇಶ್ ಹಿರಣ್ಯ ಇವರು ವಹಿಸಿ ಸ್ಪರ್ಧಾತ್ಮಕ ಯುಗದಲ್ಲಿ ಜಾಗತೀಕರಣ ಕಾಲದಲ್ಲಿ ಆಂಗ್ಲ ಭಾಷೆಯ ಅಗತ್ಯ ಎಲ್ಲರಿಗೂ ಇದೆ. ಹಾಗಾಗಿ ಗ್ರಾಮೀಣ ಪ್ರದೇಶವಾದ ಪಟ್ಟೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯು ಅನಿವಾರ್ಯವೆಂದು ಮನಗಂಡು ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭ ಮಾಡಿದೆವು. ಪೋಷಕರಾದ ತಮ್ಮೆಲ್ಲರ ಸಹಕಾರ ಬಹಳ ಮುಖ್ಯ ಎಂದು ಹೇಳಿದರು. ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗ ರಾಜಗೋಪಾಲ ಎನ್ ಅವರು ಸ್ವಾಗತಿಸಿ, ಸುಸಂಸ್ಕೃತ ವಿದ್ಯಾರ್ಥಿಯಾಗಿ ಸಮಾಜಕ್ಕೆ ನೀಡುವುದು ಆಂಗ್ಲ ಮಾಧ್ಯಮ ಶಿಕ್ಷಣದ ಮೂಲ ಉದ್ದೇಶ ಎಂದರು.

ಪ್ರತಿಭಾ ಪ್ರೌಢಶಾಲೆಯ ಮುಖ್ಯಗುರು ಸುಮನಾ ಬಿ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 2025-26ನೇ ಸಾಲಿನಲ್ಲಿ ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಸತೀಶ್ ಕೊಪ್ಪಳ ಉಪಾಧ್ಯಕ್ಷರಾಗಿ ದೀಕ್ಷಾ ರೈ ಅನಿಲೆ, ಸದಸ್ಯರಾಗಿ ವಿನುತಾ ಅರೆಪ್ಪಾಡಿ ಹಾಗೂ ಶುಭಶ್ರೀ ಪಟ್ಟೆ ಇವರನ್ನು ಆಯ್ಕೆ ಮಾಡಲಾಯಿತು. ಅಶ್ವಿನಿ ಮತ್ತು ನವ್ಯಶ್ರೀ ಮಾತಾಜಿ ಪ್ರಾರ್ಥಿಸಿ, ಭಾರತಿ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು. ಅಶ್ವಿನಿ ಮಾತಾಜಿ ಧನ್ಯವಾದಗಳನ್ನಿತ್ತರು. ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಶಿಕ್ಷಕ-ಶಿಕ್ಷಕೇತರ ವರ್ಗ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here