ಶಾಸಕ ಅಶೋಕ್ ರೈ ಪ್ರೇರಣೆ – ಮಾಣಿ- ಸಂಪಾಜೆ ರಾ.ಹೆದ್ದಾರಿ ಚರಂಡಿ ದುರಸ್ಥಿ ಆರಂಭ

0

ಪುತ್ತೂರು: ಭಾನುವಾರದಂದು ಪುತ್ತೂರು ಶಾಸಕ ಅಶೋಕ್ ರೈ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಶಾಲೆಯ ಬಳಿ ಚರಂಡಿ ಇಲ್ಲದೆ ರಸ್ತೆ ಮೇಲೆ ಮಳೆ ನೀರು ಹರಿಯುತ್ತಿರುವುದನ್ನು ಗಮನಿಸಿ ಸ್ವಯಂ ಆಗಿ ಹಾರೆ ಹಿಡಿದು ನೀರನ್ನು ಚರಂಡಿಗೆ ಹರಿಯುವಂತೆ ಮಾಡಿದ್ದು, ಈ ವೀಡಿಯೊ ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು. ರಸ್ತೆ ಬದಿಯ ಚರಂಡಿಯಲ್ಲಿ ಹೂಳು ತುಂಬಿದ್ದು, ಅದನ್ನು ತೆರವು ಮಾಡದ ವಿಚಾರ ಇಂಜಿನಿಯರ್ ಗಳ ಗಮನಕ್ಕೂ ಬರುವಂತಾಗಿದ್ದು, ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಬಹಳ ಮೆಚ್ಚುಗೆ ವ್ಯಕ್ತವಾಗಿತ್ತು.

ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ಎಂಬಂತೆ ಶಾಸಕರ ಕಾರ್ಯ ಯೋಜನೆ ನಡೆದಿತ್ತು.
ಇಂದು ಬೆಳಿಗ್ಗೆ ಮಾಣಿ- ಸಂಪಾಜೆ ರಾ. ಹೆದ್ದಾರಿಯ ಚರಂಡಿಯಲ್ಲಿ ಹೂಳೆತ್ತುವ ಕೆಲಸಕ್ಕೆ ರಾ.ಹೆದ್ದಾರಿ ಇಲಾಖೆ ಮುಂದಾಗಿದೆ. ಹೆದ್ದಾರಿಯ ಸಂಪ್ಯ, ಸಂಟ್ಯಾರ್,ಪರ್ಪುಂಜ ಹಾಗೂ ಇನ್ನಿತರ ಕಡೆಗಳಲ್ಲಿ ರಸ್ತೆ ಬದಿ ಚರಂಡಿಯ ಹೂಳೆತ್ತುವ ಕೆಲಸವಾಗಿದ್ದು, ಶಾಸಕರಿಗೆ ಸಾರ್ವಜನಿಕರು ಕೃತಜ್ಞತೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here