ಕೆವಿಎಎಫ್ಎಸ್ಯು ಆಡಳಿತ ಮಂಡಳಿಗೆ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ನಾಮ ನಿರ್ದೇಶನ
ಪುತ್ತೂರು: ಮಂಗಳೂರಿನ ರೈಸನ್ ನ್ಯೂಟ್ರಿಷನ್ ಸಂಸ್ಥೆಯ ನಿರ್ದೇಶಕ ಬೆಳ್ಳಿಪ್ಪಾಡಿ ಮನೆತನದ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅವರನ್ನು ಕರ್ನಾಟಕ ಸರ್ಕಾರವು ತತ್ಕ್ಷಣದಿಂದ ಜಾರಿಗೆ ಬರುವಂತೆ ಬೀದರ್ನ ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ (ಕೆವಿಎಎಫ್ಎಸ್ಯು) ಆಡಳಿತ ಮಂಡಳಿಗೆ ನಾಮನಿರ್ದೇಶನ ಮಾಡಿದೆ. ಅವರ ಅಧಿಕಾರಾವಧಿ ಮುಂದಿನ ಮೂರು ವರ್ಷಗಳವರೆಗೆ ಇರುತ್ತದೆ.
ಡಾ. ಸುಶಾಂತ್ ರೈ ಅವರು ಪಶುವೈದ್ಯಕೀಯ ಮತ್ತು ಕಕ್ಕುಟೋದ್ಯಮದಲ್ಲಿ ಗುರುತಿಸಲ್ಪಟ್ಟ ವ್ಯಕ್ತಿಯಾಗಿದ್ದಾರೆ. ಅವರು ಈ ಹಿಂದೆ 2019 ರಿಂದ 2024 ರವರೆಗೆ ಕರ್ನಾಟಕ ಕೋಳಿ ಸಾಕಣೆದಾರರ ಮತ್ತು ತಳಿಗಾರರ ಸಂಘದ (ಕೆಪಿಎಫ್ಬಿಎ) ಅಧ್ಯಕ್ಷರಾಗಿ ಸತತ ಎರಡು ಬಾರಿ ಸೇವೆ ಸಲ್ಲಿಸಿದ್ದಾರೆ. ಹೈದರಾಬಾದ್ನ ಐಸಿಎಆರ್-ಎನ್ಐಎಎನ್ಪಿ (ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಆಂಡ್ ಫಿಸಿಯಾಲಜಿ) ಮತ್ತು ಐಸಿಎಆರ್-ಡಿಪಿಆರ್ (ಡೈರೆಕ್ಟರೇಟ್ ಆಫ್ ಪೌಲ್ಟ್ರಿ ರಿಸರ್ಚ್)ನ ಸಂಶೋಧನಾ ಸಲಹಾ ಸಮಿತಿಯ ಸದಸ್ಯರಾಗಿರುವ ಇವರು 2024 ರಲ್ಲಿ, ಕರ್ನಾಟಕದಿಂದ ಭಾರತೀಯ ಪಶುವೈದ್ಯಕೀಯ ಮಂಡಳಿಯ (ವಿಸಿಐ) ಆಡಳಿತ ಮಂಡಳಿಗೆ ಆಯ್ಕೆಯಾಗುವ ಮೂಲಕ ಉದ್ಯಮದಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಬಲ ಪಡಿಸಿದ್ದರು.
ವ್ಯಕ್ತಿ ಪರಿಚಯ: ಡಾ. ಸುಶಾಂತ್ ರೈಯವರು ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಪ್ರತಿಷ್ಠಿತ ಬೆಳ್ಳಿಪ್ಪಾಡಿ ಬಂಟ ಮನೆತನದವರಾಗಿದ್ದಾರೆ. ದಿ. ಬೆಳಿಯೂರು ಕೆ. ವಿಠಲ ರೈ ಮತ್ತು ಬೆಳ್ಳಿಪ್ಪಾಡಿ ದಿ. ರತ್ನಸಭಾ ವಿ. ರೈ ದಂಪತಿಯ ಪುತ್ರನಾಗಿರುವ ಇವರು ತನ್ನ ಪ್ರಾಥಮಿಕ, ಪ್ರೌಢ ಮತ್ತು ಪಿಯು ಶಿಕ್ಷಣವನ್ನು ಮಂಗಳೂರಿನ ಸೈಂಟ್ ಅಲೋಶಿಯಸ್ ವಿದ್ಯಾಸಂಸ್ಥೆಯಲ್ಲಿ ಮಾಡಿ, ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಪಶು ವೈದ್ಯಕೀಯ ಕಾಲೇಜಿನಲ್ಲಿ ಪಶುವೈದ್ಯಕೀಯ ವ್ಯಾಸಂಗ ಮಾಡಿರುತ್ತಾರೆ.
ತಮ್ಮ ದೂರದೃಷ್ಟಿಯ ನಾಯಕತ್ವ ಮತ್ತು ಸಹಯೋಗದ ಪ್ರಕ್ರಿಯೆಗೆ ಹೆಸರುವಾಸಿಯಾಗಿರುವ ಡಾ. ರೈ ಅವರು, ಸಂಸ್ಥೆಗಳನ್ನು ಪರಿಣಾಮಕಾರಿ ಬೆಳವಣಿಗೆಯತ್ತ ನಿರಂತರವಾಗಿ ಕೊಂಡೊಯ್ದಿದ್ದಾರೆ. ಕಷ್ಟಕರ ಪರಿಸ್ಥಿತಿಯಲ್ಲೂ ಸಂಯಮವನ್ನು ಕಾಯ್ದುಕೊಳ್ಳುವ ಹಾಗೂ ಸವಾಲುಗಳನ್ನು ಅಭಿವೃದ್ಧಿಯ ಅವಕಾಶಗಳಾಗಿ ಪರಿವರ್ತಿಸುವ ಅವರ ಸಾಮರ್ಥ್ಯಕ್ಕಾಗಿ ಅವರನ್ನು ಮೆಚ್ಚಲಾಗುತ್ತದೆ. ಕೆವಿಎಎಫ್ಎಸ್ಯು ಮಂಡಳಿಗೆ ಅವರ ನಾಮನಿರ್ದೇಶನವು ರಾಜ್ಯದ ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನ ಪರಿಸರ ವ್ಯವಸ್ಥೆಯನ್ನು ಬಲಪಡಿಸುವತ್ತ ಮಹತ್ವದ ಹೆಜ್ಜೆ ಎಂದೇ ಪರಿಗಣಿಸಲಾಗುತ್ತಿದೆ.
ಡಾ. ಸುಶಾಂತ್ ರೈಯವರು ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಪ್ರತಿಷ್ಠಿತ ಬೆಳ್ಳಿಪ್ಪಾಡಿ ಬಂಟ ಮನೆತನದವರಾಗಿದ್ದಾರೆ. ದಿ. ಬೆಳಿಯೂರು ಕೆ. ವಿಠಲ ರೈ ಮತ್ತು ಬೆಳ್ಳಿಪ್ಪಾಡಿ ದಿ. ರತ್ನಸಭಾ ವಿ. ರೈ ದಂಪತಿಯ ಪುತ್ರನಾಗಿರುವ ಇವರು ತನ್ನ ಪ್ರಾಥಮಿಕ, ಪ್ರೌಢ ಮತ್ತು ಪಿಯು ಶಿಕ್ಷಣವನ್ನು ಮಂಗಳೂರಿನ ಸೈಂಟ್ ಅಲೋಶಿಯಸ್ ವಿದ್ಯಾಸಂಸ್ಥೆಯಲ್ಲಿ ಮಾಡಿ, ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಪಶು ವೈದ್ಯಕೀಯ ಕಾಲೇಜಿನಲ್ಲಿ ಪಶುವೈದ್ಯಕೀಯ ವ್ಯಾಸಂಗ ಮಾಡಿರುತ್ತಾರೆ.