ವಿಟ್ಲ: ಅಮೆರೀಕಾದಲ್ಲಿ ನೆಲೆಸಿರುವ ಉರ್ದಿಲಗುತ್ತು ರಾಮಪ್ರಸಾದ್ ರೈ ಅವರ ನೇತೃತ್ವದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನೇರಳಕಟ್ಟೆ ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು.

ಶಾಲಾ ಶತಮಾನೋತ್ಸವ ಸಮಿತಿಯ ಕಾರ್ಯಧ್ಯಕ್ಷರಾದ ನಿರಂಜನ್ ರೈ ಕುರ್ಲೆತ್ತಿಮಾರುರವರು ಮಾತನಾಡಿ ಉರ್ದಿಲಗುತ್ತು ರಾಮಪ್ರಸಾದ್ ರೈ ರವರು ವರ್ಷಂಪ್ರತಿ ಸುಮಾರು ನಲವತ್ತು ಸಾವಿರ ರೂಪಾಯಿ ವೆಚ್ಚದಲ್ಲಿ ಎಲ್ಲಾ ಮಕ್ಕಳಿಗೂ ಉಚಿತ ನೋಟ್ ಪುಸ್ತಕ ನೀಡುತ್ತಾ ಬಂದಿದ್ದಾರೆ. ಮಕ್ಕಳೆಲ್ಲರೂ ಉತ್ತಮ ವಿದ್ಯಾರ್ಜನೆ ಮಾಡಿ ನಾಡಿಗೆ ಅತ್ಯುತ್ತಮ ಪ್ರಜೆಗಳಾಗಿ ಈ ಸಮಾಜಕ್ಕೆ ನಿಮ್ಮಿಂದಾದ ಇದೆ ರೀತಿಯ ಕೊಡುಗೆಗಳನ್ನು ನೀಡುವಂತಾಗಬೇಕು. ಅಂತಹ ಸತ್ಕಾರ್ಯಗಳನ್ನು ನೀವು ಮಾಡುವುದೇ ಆ ಮಹಾದಾನಿಗಳಿಗೆ ನೀವು ಪ್ರತಿ ಗೌರವ ಸಲ್ಲಿಸಿದ ಹಾಗೆ ಆಗುತ್ತದೆ ಎಂದರು. ಶಾಲಾ ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಲಕ್ಷ್ಮಿ ಕೆ ಹೆಗಡೆ ಉರ್ದಿಲಗುತ್ತು ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ರಶೀದ್ ಪಿ.ಕೆ.ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಉಪಾಧ್ಯಕ್ಷರಾದ ಶಶಿಕಲಾ, ಎಸ್.ಡಿ.ಎಂ.ಸಿ. ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಸಹ ಶಿಕ್ಷಕಿ ಯಶೋಧ ಸ್ವಾಗತಿಸಿದರು, ಶಿಕ್ಷಕಿ ಆಯೀಷಾ ವಂದಿಸಿದರು. ಹಿರಿಯ ಶಿಕ್ಷಕಿ ಗೀತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.