ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ವಿಜ್ಞಾನ, ಗಣಿತ ಕೊಠಡಿಯ ಉದ್ಘಾಟನೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಸಿಬಿಎಸ್‌ಇ ವಿದ್ಯಾಲಯದಲ್ಲಿ ನೂತನವಾಗಿ ನಿರ್ಮಾಣಗೊಂಡ ’ಅನ್ವೇಷನ್’ ವಿಜ್ಞಾನ ಮತ್ತು ಗಣಿತಾಂಗನ್ – ಗಣಿತ ಪ್ರಯೋಗಾಲಯದ ಉದ್ಘಾಟನೆ ಜೂ.17 ರಂದು ನಡೆಯಿತು.


ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಅಧ್ಯಕ್ಷರೂ ಆಗಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪುತ್ತೂರು ಎಸ್‌ಆರ್‌ಕೆ ಲ್ಯಾಡರ‍್ಸ್‌ನ ಮಾಲಕ ಕೇಶವ ಅಮೈ, ಬೆಂಜನಪದವು ಕರಾವಳಿ ಕಲರ್ ಕಾರ್ಟನ್ಸ್ ಲಿಮಿಟೆಡ್‌ನ ಆಡಳಿತ ನಿರ್ದೇಶಕರಾದ ಕೆ.ಪಿ.ಶೆಟ್ಟಿ, ಕಾರ್ಕಳ ಶ್ರೀನಿವಾಸ್ ಗ್ಲಾಸ್ ಟ್ರೇಡರ್ಸ್‌ನ ಮಾಲಕರಾದ ಎಂ. ಗಣಪತಿ ಪೈ, ಶ್ರೀ ರಾಮಕುಂಜೇಶ್ವರ ವಿದ್ಯಾಲಯದ ಕಾರ್ಯದರ್ಶಿ ಕೆ.ಸೇಸಪ್ಪ ರೈ, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕುವೆಚ್ಚಾರ್, ಸಂಚಾಲಕ ಟಿ.ನಾರಾಯಣ ಭಟ್, ಶ್ರೀ ರಾಮಕುಂಜೇಶ್ವರ ವಿದ್ಯಾಲಯದ ಸಂಚಾಲಕ ಶಿವಪ್ರಸಾದ್ ಆಚಾರ್ಯ ಇಜ್ಜಾವು, ಆಡಳಿತ ಮಂಡಳಿಯ ಸದಸ್ಯರಾದ ಬಾಲಚಂದ್ರ ಮುಚ್ಚಿಂತಾಯ, ಶಾಲಾ ಮುಖ್ಯಗುರು ಪ್ರವೀದ್, ಎಲ್ಲಾ ಶಿಕ್ಷಕ- ಶಿಕ್ಷಕಿಯರು, ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here