ಪುತ್ತೂರು: ದ.ಕ.ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮಹಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ತೆರವಾದ ಸ್ಥಾನಕ್ಕೆ ದರ್ಶನ್ ಹೆಚ್.ವಿ.ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ.
ಮುಲ್ಲೈ ಮುಹಿಲನ್ ಅವರನ್ನು ಕರ್ನಾಟಕ ರಾಜ್ಯ ನೋಂದಾವಣಾ ಇಲಾಖೆಯ ಇನ್ಸ್ಪೆಕ್ಟರ್ ಜನರಲ್ ಹಾಗೂ ಕಮಿಷನರ್ ಆಫ್ ಸ್ಟಾಂಪ್ಸ್ ಆಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದ್ದು ಅವರಿಂದ ತೆರವಾದ ಸ್ಥಾನಕ್ಕೆ ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಹೆಚ್ಚುವರಿ ಆಯುಕ್ತರಾಗಿದ್ದ ದರ್ಶನ್ ಹೆಚ್.ವಿ. ಅವರನ್ನು ನೇಮಕ ಮಾಡಲಾಗಿದೆ.