ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸುರೇಶ್ ಸಾಲಿಯಾನ್ ನಿಧನ 

0

ಪುತ್ತೂರು: ಸಾಮೆತ್ತಡ್ಕ ನಿವಾಸಿ, ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸುರೇಶ್ ಸಾಲಿಯಾನ್(65ವ.) ರವರು ಅಲ್ಪಕಾಲದ ಅನಾರೋಗ್ಯದಿಂದ ಜೂ.17ರಂದು ನಿಧನ ಹೊಂದಿದರು.

ಮೃತ ಸುರೇಶ್ ಸಾಲಿಯಾನ್ ರವರು ಅನಾರೋಗ್ಯದ ನಿಮಿತ್ತ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದರು. ಮೃತ ಸುರೇಶ್ ರವರು ದರ್ಬೆಯಲ್ಲಿ ಬಜಾಜ್ ಗ್ಯಾರೇಜ್ ನಲ್ಲಿ  ಸೇವೆ ನೀಡುತ್ತಿದ್ದು, ಬಳಿಕ  ಸಾಮೆತ್ತಡ್ಕ ದ್ವಿತೀಯ ಕ್ರಾಸ್ ನಲ್ಲಿ ಪಡಿತರ ಅಂಗಡಿಯನ್ನು ನಡೆಸುತ್ತಿದ್ದರು. ಸಾಮೆತ್ತಡ್ಕ ಕಾಂಗ್ರೆಸ್ ಬೂತ್ ಸಮಿತಿಯ ಸಕ್ರಿಯ ಸದಸ್ಯರಾಗಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು ಜೊತೆಗೆ ದ.ಕ ಗ್ಯಾರೇಜು ಮಾಲಕರ ಸಂಘ, ಪುತ್ತೂರು ತಾಲೂಕಿನ ಗೌರವಾಧ್ಯಕ್ಷರಾಗಿ ಸೇವೆಯನ್ನು ನೀಡುತ್ತಿದ್ದರು.
ಮೃತರು ಪತ್ನಿ ಶಾಂತಾ, ಪುತ್ರಿ ಸುಚಿತ್ರಾ, ಪುತ್ರ ಕಾರ್ತಿಕ್ ರವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here