ಉಪ್ಪಿನಂಗಡಿ: ವ್ಯಕ್ತಿಯೋರ್ವರು ಅಂಗಳದಲ್ಲಿ ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಶಿರಾಡಿ ಗ್ರಾಮದ ಕಡಂಬೂರು ಎಂಬಲ್ಲಿಂದ ವರದಿಯಾಗಿದೆ.
ಕೇರಳ ಮೂಲಕ ವಿನೋದ್ ಕುಮಾರ್ (51) ಮೃತ ವ್ಯಕ್ತಿ. ಬೆಂಗಳೂರು ಮೂಲದ ವ್ಯಕ್ತಿಯೋರ್ವರು ಇತ್ತೀಚೆಗೆ ಖರೀದಿಸಿದ್ದ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆಂದು ಬಂದಿದ್ದ ವಿನೋದ್ ಕುಮಾರ್ ಗೆ ತೋಟದಲ್ಲಿಯೇ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಮಂಗಳವಾರದಂದು ತೋಟದ ಮನೆಯ ಅಂಗಳದಲ್ಲಿ ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸಂಶಯಾಸ್ಪದ ಸಾವಿನ ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.