ಪುತ್ತೂರು: ಸುಮಾರು 30 ವರ್ಷಗಳ ಕಾಲ ಅಧ್ಯಾಪಕರಾಗಿ, ಸಿಆರ್ಪಿಯಾಗಿ, ಮಿತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಗುರುವಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ಮುತ್ತಪ್ಪ ಪೂಜಾರಿಯವರಿಗೆ ಗುರುಭ್ಯೋ ನಮಃ ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಇತ್ತೀಚೆಗೆ ಗೌರವಾರ್ಪಣೆ ಮಾಡಲಾಯಿತು. ಸಂಘದ ಅಧ್ಯಕ್ಷರಾದ ನಾಗೇಶ್ ಪಟಾಳಿ, ಜಿಲ್ಲಾ ಸಂಘದ ಉಪಾಧ್ಯಕ್ಷರಾದ ರಾಮಣ್ಣ ರೈ, ತಾಲೂಕು ಸಂಘದ ಉಪಾಧ್ಯಕ್ಷ ಸುಧಾಕರ್ ರೈ, ಸಿಆರ್ಪಿ ಶ್ರೀಮತಿ ಪರಮೇಶ್ವರಿ, ಸುಬೋಧ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ರೈ, ಮುಖ್ಯ ಗುರು ಜನಾರ್ಧನ್, ಶ್ರೀಮತಿ ಅನ್ನಪೂರ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.