ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲಿಜನ್ನವರ ಸಹಯೋಗದಲ್ಲಿ ಯೂನಿಯನ್ ಪ್ರೌಢಶಾಲೆ ಮಾಜಾಳಿಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ವಿಜ್ಞಾನ ಶಿಕ್ಷಕಿ ಕಪಿಲಾ ಜಿ ನಾಯ್ಕರವರು ಪರಿಸರದ ಮಹತ್ವ ಹಾಗೂ ಉದ್ದೇಶವನ್ನು ವಿವರಿಸಿದರು.
ಪರಿಸರವನ್ನು ಸಂರಕ್ಷಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂಬುದನ್ನು ತಿಳಿಸಿದರು. ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ಅಧ್ಯಕ್ಷೆ ಮಲ್ಲಿಕಾ ಜೆ ರೈಯವರು ಪರಿಸರದ ಬಗ್ಗೆ ಮಾಹಿತಿ ನೀಡಿದರು. ವಿಶ್ವ ಪರಿಸರ ದಿನಾಚರಣೆ ನಿಮಿತ್ತ ೧೦ ನೇ ತರಗತಿಯ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು . ಶಾಲಾ ಮುಖ್ಯೋಪಾಧ್ಯಾಯನಿ ಶಿಲ್ಪಾ ಸಾಲುಂಕೆ, ಶಿಕ್ಷಕ ಶಿಕ್ಷಕಿಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.