ಗೌರವಾಧ್ಯಕ್ಷ: ಮನಮೋಹನ ರೈ, ಅಧ್ಯಕ್ಷ: ಶರತ್ ಕುಮಾರ್ ಪಾರ, ಕಾರ್ಯದರ್ಶಿ: ಗಣೇಶ್ ಹೊಳ್ಳ, ಕೋಶಾಧಿಕಾರಿ ಉಚಿತ್ ಬದಿನಾರು ಆಯ್ಕೆ
ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಆಗಸ್ಟ್ 27, 28 ರಂದು ನಡೆಯಲಿರುವ 40 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಮಿತಿಯ ಗೌರವಾಧ್ಯಕ್ಷ ಮನಮೋಹನ ರೈ ಚೆಲ್ಯಡ್ಕರವರ ಅಧ್ಯಕ್ಷತೆಯಲ್ಲಿ ಬೆಟ್ಟಂಪಾಡಿ ದೇವಾಲಯದ ವಠಾರದಲ್ಲಿ ಇತ್ತೀಚೆಗೆ ನಡೆಯಿತು.
ಗೌರವಾಧ್ಯಕ್ಷರಾಗಿ ಉದ್ಯಮಿ ಮನಮೋಹನ ರೈ ಚೆಲ್ಯಡ್ಕ, ಅಧ್ಯಕ್ಷರಾಗಿ ಶರತ್ ಕುಮಾರ್ ಪಾರ, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಹೊಳ್ಳ ತೋಟದಮೂಲೆ, ಕೋಶಾಧಿಕಾರಿಯಾಗಿ ಉಚಿತ್ ಬದಿನಾರುರವರನ್ನು ಆಯ್ಕೆ ಮಾಡಲಾಯಿತು. ಸಮಿತಿಯ ಸಂಚಾಲಕ ಡಾ. ಸುಬ್ರಹ್ಮಣ್ಯ ವಾಗ್ಲೆ, ನಿಕಟಪೂರ್ವ ಸಮಿತಿಯ ಅಧ್ಯಕ್ಷ ಉಮೇಶ್ ಮಿತ್ತಡ್ಕ, ಪ್ರಧಾನ ಕಾರ್ಯದರ್ಶಿ ಜಯರಾಮ ರೈ ಮೂರ್ಕಾಜೆ, ಕೋಶಾಧಿಕಾರಿ ವಿಶಾಖ್ ರಾಜ್ ರವರು ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು. ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಗಣೇಶೋತ್ಸವ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
