ನೆಹರುನಗರ: ಕಾರು-ಬೈಕ್ ಡಿಕ್ಕಿ, ಸವಾರನಿಗೆ ಗಾಯ

0

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ನೆಹರು ನಗರ ಜಂಕ್ಷನ್‌ನಲ್ಲಿ ಕಾರು ಹಾಗೂ ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಜೂ.18ರಂದು ಸಂಜೆ ನಡೆದಿದೆ.


ಗಾಯಗೊಂಡವರನ್ನು ಮುರ ನಿವಾಸಿ ತನ್ಸೀರ್ ಎಂದು ಗುರುತಿಸಲಾಗಿದೆ. ಕಬಕದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಬೈಕ್‌ಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಘಟನೆಯಿಂದ ಬೈಕ್ ಸವಾರ ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here