ಮಂಗಳೂರು: ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸುವುದಕ್ಕಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಸರ್ವೆಯರ್ ನಂದೀಶ್ ಹಾಗೂ ದಲ್ಲಾಳಿ ದಿವಾಕರ್ ಎಂಬವರನ್ನು ಬಂಧಿಸಿದ್ದಾರೆ.
ವ್ಯಕ್ತಿಯೋರ್ವರು ತನ್ನ ಹಾಗೂ ತಾಯಿಯ ಹೆಸರಿನಲ್ಲಿರುವ, ಕಂಕನಾಡಿ ಮತ್ತು ಬಜಾಲ್ ಗ್ರಾಮದ ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸಲು 2025ರ ಫೆಬ್ರವರಿಯಲ್ಲಿ ಮಂಗಳೂರು ಯು.ಪಿ.ಒ.ಆರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು.ಬಳಿಕ ಸರ್ವೆಯರ್ ನಂದೀಶ್ 2025ರ ಎಪ್ರಿಲ್ನಲ್ಲಿ ಸರ್ವೆ ನಡೆಸಿ 6,500 ರೂ.ವನ್ನು ಲಂಚವಾಗಿ ಸ್ವೀಕರಿಸಿದ್ದಲ್ಲದೆ, 20,೦೦೦ ರೂ.ವನ್ನು ಮಧ್ಯವರ್ತಿ ಬಿಜೈಯ ದಿವಾಕರ್ ಮೂಲಕ ಪಡೆದುಕೊಂಡಿದ್ದರು.ನಂತರ ಸರ್ವೆಯರ್ ನಂದೀಶ್ ಎರಡೂ ಗ್ರಾಮದ ಎರಡೂ ಸ್ಥಳಗಳ ಸಿಂಗಲ್ ಸೈಟ್ ನಕ್ಷೆ ಮತ್ತು ಪ್ರಾಪರ್ಟಿ ಕಾರ್ಡ್ ನೀಡಲು ಹೆಚ್ಚುವರಿಯಾಗಿ 18,೦೦೦ ರೂ. ನೀಡುವಂತೆ ಒತ್ತಾಯಿಸಿದ್ದರು ಎಂದು ಆರೋಪಿಸಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.ಸರ್ವೆಯರ್ ನಂದೀಶ್ ಇದೇ ತಿಂಗಳಲ್ಲಿ ಮತ್ತೆ 15,೦೦೦ ರೂ.ವನ್ನು ಮಧ್ಯವರ್ತಿ ದಿವಾಕರ್ ಮೂಲಕ ಪಡೆದುಕೊಂಡಿದ್ದರು. ಹೀಗೆ ಒಟ್ಟು 41,5೦೦ ರೂ.ವನ್ನು ಪಡೆದುಕೊಂಡು ಬುಧವಾರ ಮತ್ತೆ 2,೦೦೦ ರೂ.ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.ಸರ್ವೆಯರ್ ನಂದೀಶ್ ಮತ್ತು ಮಧ್ಯವರ್ತಿ ದಿವಾಕರ್ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪೊಲೀಸ್ ಅಽಕ್ಷಕ ಕುಮಾರಚಂದ್ರ, ಉಪಾಧಿಕ್ಷಕರಾದ ಡಾ|ಗಾನ ಪಿ. ಕುಮಾರ್ ಮತ್ತು ಸುರೇಶ್ ಕುಮಾರ್ ಪಿ., ಪೊಲೀಸ್ ನಿರೀಕ್ಷಕರಾದ ಭಾರತಿ ಜಿ. ಮತ್ತು ಚಂದ್ರಶೇಖರ್ ಕೆ.ಎನ್. ಪಾಲ್ಗೊಂಡಿದ್ದರು ಎಂದು ಲೋಕಾಯುಕ್ತ ಪೊಲೀಸರ ಪ್ರಕಟಣೆ ತಿಳಿಸಿದೆ.