ಪುತ್ತೂರು: 1980ರಿಂದ ಸರ್ವರಿಗೂ ಉಚಿತ ಶಿಕ್ಷಣವನ್ನು ನೀಡುತ್ತಿರುವ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ, ನೇತ್ರಾವತಿ ವಲಯ, ಪುತ್ತೂರು ತಾಲೂಕು ಮತ್ತು ಶ್ರೀ ಪತಂಜಲಿ ಯೋಗ ಫೌಂಡೇಶನ್ (ರಿ.) ಮಂಗಳೂರು, ಆಯುಷ್ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಇದರ ಸಹಯೋಗದೊಂದಿಗೆ ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಧೈಯೋದ್ದೇಶದೊಂದಿಗೆ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಜೂ. 21ರಂದು ಬೆಳಗ್ಗೆ ಗಂಟೆ 5.00ರಿಂದ 7.00ರವರೆಗೆ ನಡೆಯಲಿದೆ.
ಬಿಸಿರೋಡ್, ಕಲ್ಲಡ್ಕ, ಉಪ್ಪಿನಂಗಡಿ, ಆಲಂಕಾರು, ಸುಬ್ರಹ್ಮಣ್ಯ, ಪಂಜ ಮತ್ತು ಪುತ್ತೂರು ತಾಲೂಕಿನ ಎಲ್ಲಾ ಯೋಗಬಂಧುಗಳು, ಇತರೇ ಸಂಘಸಂಸ್ಥೆಗಳ ಪದಾಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 750ಕ್ಕೂ ಮಿಕ್ಕಿ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ..