ಕಡಬ: ಕಡಬ ಸಮುದಾಯ ಆಸ್ಪತ್ರೆಗೆ ಖಾಯಂ ವೈದ್ಯಾಧಿಕಾರಿಯನ್ನು ನೇಮಿಸುವಂತೆ ಆಗ್ರಹಿಸಿ ಕಡಬ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಶಾಕೀರ್ ಜಿಲ್ಲಾ ಉಸ್ತುವಾರಿ ಹಾಗು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರಿಗೆ ಮನವಿ ನೀಡಿದರು.
ಕಡಬ ತಾಲೂಕು ಕೇಂದ್ರದಲ್ಲಿರುವ ಕಡಬ ಸಮುದಾಯ ಆಸ್ಪತ್ರೆ ಸುಸಜ್ಜಿತ ಕಟ್ಟಡವನ್ನು ಹೊಂದಿದೆ. ದಿನವೊಂದಕ್ಕೆ 300 ಕ್ಕೂ ಹೆಚ್ಚು ವಿವಿಧ ಖಾಯಿಲೆಯ ರೋಗಿಗಳು ಚಿಕಿತ್ಸೆಗಾಗಿ ಬರುತ್ತಾರೆ. ಆಸ್ಪತ್ರೆಯಲ್ಲಿ ಖಾಯಂ ವೈದ್ಯಾಧಿಕಾರಿ ನಿವೃತ್ತಿಯಾಗಿ ಎರಡು ವರ್ಷಗಳಾಗಿದೆ ಬಳಿಕ ಹಲವು ಬಾರಿ ಖಾಯಂ ವೈದ್ಯರ ನೇಮಕಾತಿಗಾಗಿ ಸಂಬಂಧಪಟ್ಟವರಿಗೆ ಈ ಬಗ್ಗೆ ಮನವಿ ಸಲ್ಲಿಸಲಾಗಿದೆ. ವೈದ್ಯರಿಲ್ಲದೆ ಸರಿಯಾದ ಚಿಕಿತ್ಸೆ ಸಿಗದೆ ಹಲವು ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಖಾಯಂ ವೈದ್ಯರ ನೇಮಕ ಮಾಡಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಮನವಿ ನೀಡುವ ಸಂದರ್ಭ ಕಡಬ ತಾ.ಪಂ ಮಾಜಿ ಸದದ್ಯ ಫಝಲ್ ಕೋಡಿಂಬಾಳ ಇದ್ದರು.