ದ.ಕ ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ಗೆ ಬೀಳ್ಕೊಡುಗೆ, ದರ್ಶನ್ ಹೆಚ್.ವಿಗೆ ಸ್ವಾಗತ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಜಿಲ್ಲೆಯಿಂದ ವರ್ಗಾವಣೆಗೊಂಡ ಮುಲ್ಲೈ ಮುಹಿಲನ್‌ರವರಿಗೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಸ್ಮರಣಿಕೆ, ಹೂಗುಚ್ಛ ನೀಡಿ ಬೀಳ್ಕೊಡಲಾಯಿತು ಹಾಗೇ ನೂತನ ಜಿಲ್ಲಾಧಿಕಾರಿಯಾಗಿ ಆಗಮಿಸಿ ಕರ್ತವ್ಯಕ್ಕೆ ಹಾಜರಾದ ದರ್ಶನ್ ಹೆಚ್.ವಿಯವರಿಗೆ ಸಂಘದ ವತಿಯಿಂದ ಹೂ ಗುಚ್ಛ ನೀಡುವ ಮೂಲಕ ಸ್ವಾಗತಿಸಲಾಯಿತು. ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಉಮೇಶ್ ಕಾವಡಿಯವರು ಹೂ ಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here