ಆಲಂಕಾರು-ಕೊಂಡಾಡಿ: ರಸ್ತೆಗೆ ಅಡ್ಡಬಂದ ಹಾವು – ರಿಕ್ಷಾ ಚಾಲಕನಿಂದ ಹಠಾತ್ ಬ್ರೇಕ್ | ಪ್ರಯಾಣಿಕನಿಗೆ ಗಾಯ

0

ರಾಮಕುಂಜ: ರಸ್ತೆ ಅಡ್ಡ ದಾಟುತ್ತಿದ್ದ ಹಾವು ನೋಡಿ ರಿಕ್ಷಾ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ರಿಕ್ಷಾ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ರಿಕ್ಷಾದಲ್ಲಿದ್ದ ಪ್ರಯಾಣಿಕರೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಾಂತಿಮೊಗರು ಸಮೀಪದ ಕೊಂಡಾಡಿ ಎಂಬಲ್ಲಿ ಜೂ.18ರಂದು ಸಂಜೆ ನಡೆದಿದೆ.


ಆಲಂಕಾರಿನಿಂದ ಶಾಂತಿಮೊಗರು ಕಡೆಗೆ ಮಹಮ್ಮದ್ ಮುಸ್ತಾಫ ಎಂಬವರು ರಿಕ್ಷಾ(ಕೆಎ 21, ಸಿ 1293) ಚಲಾಯಿಸಿಕೊಂಡು ಬಂದಿದ್ದು ಆಲಂಕಾರು ಗ್ರಾಮದ ಶಾಂತಿಮೊಗರು ಕೊಂಡಾಡಿ ಎಂಬಲ್ಲಿ ತಲುಪುತ್ತಿದ್ದಂತೆ ರಸ್ತೆ ಅಡ್ಡ ದಾಟುತ್ತಿದ್ದ ಹಾವು ನೋಡಿ ಹಠಾತ್ ಬ್ರೇಕ್ ಹಾಕಿದಾಗ ರಿಕ್ಷಾ ನಿಯಂತ್ರಣ ಕಳೆದುಕೊಂಡು ರಸ್ತೆಯ ಬಲ ಬದಿಯ ಚರಂಡಿಗೆ ಬಿದ್ದಿದೆ. ಘಟನೆಯಲ್ಲಿ ರಿಕ್ಷಾದ ಹಿಂಬದಿಯಲ್ಲಿ ಕುಳಿತಿದ್ದ ಪೆರಾಬೆ ಗ್ರಾಮದ ಸಾಮೆತಡ್ಕ ನಿವಾಸಿ ನಯಾಝ್ ಎಂಬವರ ಎಡ ಕಾಲಿನ ಮೊಣಗಂಟಿಗೆ ಗಾಯವಾಗಿದೆ. ಗಾಯಾಳು ನಯಾಝ್ ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here