ಪುತ್ತೂರು: ಕಳೆದ ಎಪ್ರಿಲ್ 2025ರಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 9೦% ಕ್ಕಿಂತ ಅಧಿಕ ಅಂಕ ಗಳಿಸಿದ ಪುತ್ತೂರು ಬಂಟರ ಸಂಘದ ವ್ಯಾಪ್ತಿಯ ಬಂಟ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಮತ್ತು ಅದೇ ತರಗತಿಯಲ್ಲಿ ಅಂತ್ಯೋದಯ ಕಾರ್ಡ್ ಹೊಂದಿದ್ದು ಶೇಕಡಾ 75% ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮತ್ತು ಬಿಪಿಎಲ್ ಕಾರ್ಡ್ ಹೊಂದಿದ ಶೇಕಡಾ 80% ಕ್ಕಿಂತ ಹೆಚ್ಚು ಅಂಕ ಗಳಿಸಿದ ಬಂಟ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅಲ್ಲದೇ JEE ಮುಖ್ಯ ಪರೀಕ್ಷೆಯಲ್ಲಿ 2000 ರ್ಯಾಂಕ್ ಗಿಂತ ಒಳಗಿನ ವಿದ್ಯಾರ್ಥಿಗಳಿಗೆ, NEET ಪರೀಕ್ಷೆಯಲ್ಲಿ 620 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ CET ಪರೀಕ್ಷೆಯಲ್ಲಿ 1000 ಒಳಗಿನ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಗೌರವರ್ಪಣೆ ನಡೆಯಲಿದೆ. ಸಂಬಂಧಪಟ್ಟ ಅರ್ಜಿಯನ್ನು ಬಂಟರ ಸಂಘ ಪುತ್ತೂರು ಕಛೇರಿಯಿಂದ ಪಡೆದುಕೊಂಡು ಅರ್ಜಿಯಲ್ಲಿ ತಿಳಿಸಿದಂತೆ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ, ಆರ್ಥಿಕವಾಗಿ ಹಿಂದುಳಿದವರಿಗೆ ಅಂತ್ಯೋದಯ/ ಬಿಪಿಎಲ್ ಕಾರ್ಡ್ನ ಜೆರಾಕ್ಸ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಕರಿಸಿ,
ಜೂ.30ರ ಒಳಗಾಗಿ ಸಂಘದ ಕಛೇರಿಗೆ ತಲುಪಿಸುವುದು. ಜುಲೈ 2ರ ನಂತರ ಬರುವ ಯಾವುದೇ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಪುತ್ತೂರು ತಾಲ್ಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ ಹಾಗೂ ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿರವರು ತಿಳಿಸಿದ್ದಾರೆ.