ಜೂ.22 :ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕುಂಬ್ರ ಶಾಖೆಯ ದಶಮಾನೋತ್ಸವ ಕಾರ್ಯಕ್ರಮ

0

ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಪ್ರಾಯೋಜಕತ್ವದಲ್ಲಿರುವ ಪುತ್ತೂರು ಎಪಿಎಂಸಿ ರಸ್ತೆಯ ಮಣಾಯಿ ಅರ್ಚ್ ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಇದರ ಕುಂಬ್ರ ಕಿರಣ್ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕುಂಬ್ರ ಶಾಖೆಯು ಯಶಸ್ವಿ 10 ವರ್ಷಗಳನ್ನು ಪೂರೈಸಿದ ಅಂಗವಾಗಿ ದಶಮಾನೋತ್ಸವ ಕಾರ್ಯಕ್ರಮವು ಜೂ.22 ರಂದು ಕುಂಬ್ರ ಕಿರಣ್ ಸಂಕೀರ್ಣದಲ್ಲಿ ನಡೆಯಲಿದೆ.


ಬೆಳಿಗ್ಗೆ 7 ಗಂಟೆಗೆ ಗಣಹೋಮ ಮತ್ತು ಲಕ್ಷ್ಮಿ ಪೂಜೆ, ಬೆಳಗ್ಗೆ ಗಂಟೆ 9.30 ಕೆ ಸಭಾಕಾರ್ಯಕ್ರಮ ನಡೆಯಲಿದೆ.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ನಿ. ಪುತ್ತೂರು ಇದರ ಅಧ್ಯಕ್ಷ ಚಿದಾನಂದ ಬೈಲಾಡಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು, ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಎ ಕೆ ಜಯರಾಮ ರೈ, ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಕುಂಬ್ರ ವರ್ತಕರ ಸಂಘದ ಅಧ್ಯಕ್ಷ ಪಿ ಕೆ ಮಹಮ್ಮದ್ ಹಾಗೂ ಪುರೋಹಿತ ಕೃಷ್ಣಕುಮಾರ್ ಉಪಾಧ್ಯಾಯ ಪಟ್ಲಮೂಲೆ ಭಾಗವಹಿಸಲಿದ್ದಾರೆ. ಸದಸ್ಯರು ಹಾಗೂ ಗ್ರಾಹಕರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಚಿದಾನಂದ ಬೈಲಾಡಿ, ಹಾಗೂ ಸಂಘದ ನಿರ್ದೇಶಕರು ಕುಂಬ್ರ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಲೋಕೇಶ್ ಚಾಕೋಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here