ಪುತ್ತೂರು : ಪುರುಷರಕಟ್ಟೆಯ ಸರಸ್ವತಿ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಣೆ ಮಾಡಲಾಯಿತು.
ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು. ಶಾಲಾ ಸಂಚಾಲಕರಾದ ಅವಿನಾಶ್ ಕೊಡಂಕಿರಿ ಮಾತನಾಡಿ, ಯೋಗವು ಜೀವನ ವಿಧಾನ ಆಗಬೇಕು ಮತ್ತು ಆರೋಗ್ಯಕ್ಕಾಗಿ ನಿರಂತರ ಯೋಗ ಅಭ್ಯಾಸ ಮಾಡಬೇಕು ಎಂದು ತಿಳಿಸಿದರು.
ಯೋಗ ಶಿಕ್ಷಕರಾದ ಅಶೋಕ್ ಮಾತನಾಡಿ, ಸಾಧು ಸಂತರಿಂದ ಹಿಡಿದು ಇಂದಿನ ವರೆಗೆ ಯೋಗ ಬೆಳೆದು ಬಂದಿದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗದ ಮಹತ್ವವನ್ನು ಸಾರಿದ ಕೀರ್ತಿ ಭಾರತದ್ದು ಎಂದರು. ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಣ ಸಂಯೋಜಕರಾದ ಶ್ರೀಲಕ್ಷ್ಮೀ ಮೊಳೆಯಾರ್ ಕಾರ್ಯಕ್ರಮ ನಿರ್ವಹಿಸಿದರು.