ಪುತ್ತೂರು: ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸಾಮೂಹಿಕ ಯೋಗ ಮತ್ತು ಕಾನೂನು ಮಾಹಿತಿ ಕಾರ್ಯಾಗಾರ ಪುತ್ತೂರು ನ್ಯಾಯಾಲಯದ ಪರಾಶರ ಸಭಾಂಗಣದಲ್ಲಿ ಜೂ.21ರ ಬೆಳಗ್ಗೆ ನಡೆಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗು ವಕೀಲರ ಸಂಘ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.
ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶೆ ಮತ್ತು ಜೆಎಂಎಫ್ಸಿ ಹಾಗು ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಪ್ರಕೃತಿ ಕಲ್ಯಾಣ್ಪುರ ಉದ್ಘಾಟಸಿದರು. ಬಳಿಕ ಸರಳ ಯೋಗ ನಡೆಯಿತು. ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ, ಹೆಚ್ಚುವರಿ ಹಿರಿಯ ವ್ಯವಹಾರಿಕ ನ್ಯಾಯಾಧೀಶ ದೇವರಾಜ್ ವೈ ಎಚ್, ಪ್ರಧಾನ ವ್ಯವಹಾರಿಕ ನ್ಯಾಯಾಧೀಶ ಶಿವಣ್ಣ ಎಚ್ ಆರ್, ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶ ಯೊಗೇಂದ್ರ ಶೆಟ್ಟಿ, ವಕೀಲರ ಸಂಘದ ಮಾಜಿ ಅಧ್ಯಕ್ಷ ಉದಯಶಂಕರ್ ಶೆಟ್ಟಿ ಸಹಿತ ಸಂಘದ ಪದಾಧಿಕಾರಿಗಳು ಉಪಸ್ಥಿರಿದ್ದರು. ಯೋಗ ಕೇಂದ್ರ ಪುತ್ತೂರು ಇದರ ಅಧ್ಯಕ್ಷ ಶ್ರೀಗಿರೀಶ ಮಳಿ ಅವರು ಯೋಗ ಶಿಕ್ಷಕರಾಗಿ ಸಲಹೆ ನೀಡಿದರು.