ಈಶ್ವರಮಂಗಲ: ಈಶ್ವರಮಂಗಲ ಹನುಮಗಿರಿ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಆಡಳಿತ ಮಂಡಳಿಯ ಸದಸ್ಯ ಪದ್ಮನಾಭ ಉದ್ಘಾಟಿಸಿ, 2014 ಜೂನ್ 21ರಂದು ನಮ್ಮ ದೇಶದ ಪ್ರಧಾನಮಂತ್ರಿಯಾದ ನರೇಂದ್ರ ಮೋದಿಯವರು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲು ಕರೆಕೊಟ್ಟರು ಮತ್ತು ಮನುಷ್ಯನ ದೇಹ ಮತ್ತು ಪ್ರಕೃತಿಯ ಒಗ್ಗೂಡುವಿಕೆಯೇ ಯೋಗ ಎಂದು ಹೇಳಿದರು.
ಸಂಸ್ಥೆಯ ಪ್ರಾಂಶುಪಾಲ ಕೆ ಶಾಮಣ್ಣ ಮಾತನಾಡಿ, ಯೋಗ ಮಾಡುವುದರಿಂದ ನಮ್ಮ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳುವುದಲ್ಲದೇ ಪ್ರತಿದಿನ ಯೋಗ ಮಾಡುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳಾದ ಪ್ರತೀತಿ,ತ್ವಿಷ,ಸಾನಿಧ್ಯ ಇವರಿಂದ ಯೋಗ ಪ್ರದರ್ಶನ ನಡೆಯಿತು. ವೇದಿಕೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕಿಯರಾದ ಸೌಮ್ಯ ಎ ಮತ್ತು ಲತಾ ಡಿ ಕೆ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಯಶಸ್ ಸ್ವಾಗತಿಸಿ ,ತಶ್ವಿ ವಂದಿಸಿ, ಶ್ರೀಯಾ ನಿರೂಪಿಸಿದರು.