ಪುತ್ತೂರು: ನಗರಸಭೆ ಸದಸ್ಯ ಮುಕ್ರಂಪಾಡಿ ಆನಂದಾಶ್ರಮ ಬಳಿಯ ನಿವಾಸಿ ಶೀನಪ್ಪ ನಾಯ್ಕ ಅವರು ಜೂ.21ರಂದು ನಿಧನಾದರು.
ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಉದ್ಯೋಗಿಯಾಗಿದ್ದ ಶೀನಪ್ಪ ನಾಯ್ಕ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾಗಿದ್ದಾರೆ.
ಮೃತರು ಪತ್ನಿ ಸಾವಿತ್ರಿ, ಪುತ್ರಿಯರಾದ ಉಪ್ಪಿನಂಗಡಿ ಕರ್ಣಾಟಕ ಬ್ಯಾಂಕ್ ಉದ್ಯೋಗಿ ಶೋಭ, ಮಂಗಳೂರು ಯೂನಿಯನ್ ಬ್ಯಾಂಕ್ ಉದ್ಯೋಗಿ ಸೀಮಾ, ಕಂಪೆನಿ ಉದ್ಯೋಗಿಯಲ್ಲಿರುವ ಪುತ್ರ ಸಂದೇಶ್ ಅವರನ್ನು ಅಗಲಿದ್ದಾರೆ.