
ಪುತ್ತೂರು: ದರ್ಬೆ ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ಅಧಿಕಾರ ಸ್ವೀಕಾರ ಹಾಗೂ ವಿವಿಧ ಕ್ಲಬ್ಗಳ ಉದ್ಘಾಟನೆಯು ಶಾಲಾ ಸಭಾಂಗಣದಲ್ಲಿ ಜರುಗಿತು.
ಮುಖ್ಯ ಅತಿಥಿಯಾಗಿದ್ದ ನಗರ ಠಾಣಾ ಉಪ ನಿರೀಕ್ಷಕ ಆಂಜನೇಯ ರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ಅಕ್ಷರ ಕಲಿಸಿದ ಗುರುಗಳನ್ನು ಮರೆಯಬಾರದು. ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಮಂತ್ರಿಗಳಾಗಿ ಬರಬೇಕು ಎಂದ ಅವರು, ಮೊಬೈಲ್ ಬಳಕೆ ಕಡಿಮೆ ಮಾಡಿ, ಶಿಕ್ಷಣಕ್ಕೆ ಹೆಚ್ಚಿನ ಗಮನ ನೀಡುವಂತೆ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಬೆಥನಿ ವಿದ್ಯಾಸಂಸ್ಥೆಗಳ ಸಂಚಾಲಕಿ ಭಗಿನಿ ಪ್ರಶಾಂತಿ ಬಿ.ಎಸ್. ಮಾತನಾಡಿ, ಈಗಿನ ವಿದ್ಯಾರ್ಥಿಗಳು ಸಮಾಜದ ಉತ್ತಮ ನಾಯಕರಾಗಿ ಮೂಡಿ ಬರುವಂತೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಾಮಾಜಿಕ ಸೇವಾ ಕಾರ್ಯಕರ್ತ ಅಬ್ದುಲ್ ರಜಾಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮುಖ್ಯೋಪಾಧ್ಯಾಯಿನಿ ಭಗಿನಿ ಅನಿತಾ ಟ್ರೇಸಿಯವರು ಪ್ರಮಾಣ ವಚನ ಬೋಧಿಸಿದರು.
ಶಿಕ್ಷಕರಾದ ಅನಿತಾ ರೊಡ್ರಿಗಸ್ ಸ್ವಾಗತಿಸಿದರು. ಭಗಿನಿ ಜಾನೆಟ್ ವಂದಿಸಿದರು. ಹೇಮಲತಾ ಕಾರ್ಯಕ್ರಮ ನಿರೂಪಿಸಿದರು