ಪುತ್ತೂರು: ಸವಣೂರು ಮೊಗರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಸಮೂಹ ಸಂಪನ್ಮೂಲ ಕೇಂದ್ರ ಸವಣೂರಿನ ಸಂಪನ್ಮೂಲ ವ್ಯಕ್ತಿಗಳಾದ ಜಯಂತ್ ವೈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮಹತ್ವ ಕುರಿತು ಮಾಹಿತಿ ನೀಡುವುದರೊಂದಿಗೆ ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಶಾಲಭಿವೃದ್ದಿ ಸಮಿತಿ ಅಧ್ಯಕ್ಷರಾದ ರಫೀಕ್ ಎಂ. ಎ, ಸದಸ್ಯರಾದ ಉಮ್ಮರ್, ಕಟ್ಟಡ ಕಾಂಟ್ರಾಕ್ಟರಾದ ಅಶ್ಪದ್, ಸಹ ಶಿಕ್ಷಕರುಗಳಾದ ಶ್ರೀಮತಿ ಜಾನಕಿ ಶ್ರೀಮತಿ ಗುಲ್ಸನ್ ಕೌಸರ್,ಕುಮಾರಿ ದಯಾಮಣಿ ಕೆ ಗಾಯತ್ರಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿವಿದ ರೀತಿಯ ಯೋಗಾಸನಗಳನ್ನು ಅಭ್ಯಾಸ ಮಾಡುವುದರ ಮೂಲಕ ವಿದ್ಯಾರ್ಥಿಗಳು ಯೋಗದ ಮಹತ್ವವನ್ನು ಅರಿತುಕೊಂಡರು.
