ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ 11ನೇ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಯೋಗ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ವಹಿಸಿ ಶುಭ ಹಾರೈಸಿದರು. ಮುಖ್ಯಅತಿಥಿಗಳಾದ ಪುತ್ತೂರು ಯೋಗ ಕೇಂದ್ರದ ಅಧ್ಯಕ್ಷರೂ, ನ್ಯಾಯವಾದಿಗಳೂ ಆದ ಗಿರೀಶ್ ಮಳಿ ಕಾರ್ಯಕ್ರಮವನ್ನು ಉದ್ಘಾಟಿಸಿ ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಹೇಳಿದರು. ಮಂಜುಳಾ ಗಿರೀಶ್ ಮಳಿ, ಸಹಆಡಳಿತಾಧಿಕಾರಿ ಹೇಮಾನಾಗೇಶ್ ರೈ , ಹಿರಿಯ ಶಿಕ್ಷಕಿ ಸವಿತಾ ಕೆ, ಆಂಗ್ಲ ಮಾಧ್ಯಮದ ಸಹ ಮುಖ್ಯಸ್ಥೆ ಅನಿತಾ ಜೆ ರೈ, ಯೋಗ ಮತ್ತು ಸಂಸ್ಕಾರ ತರಗತಿಗಳ ಮೂಲಕ ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯಗಳನ್ನು ಬೋಧಿಸುತ್ತಿರುವ ಶಿಕ್ಷಕಿ ವಿಮಲ ಸಿ ಎಚ್ ಉಪಸ್ಥಿತರಿದ್ದರು.
ಶಾಲಾಡಳಿತಾಧಿಕಾರಿ ವಸಂತ ರೈ ಕಾರ್ಕಳ ಅವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು . ಯೋಗ ಶಿಕ್ಷಕಿ ಶಶಿಕಲಾ ಪ್ರಾರ್ಥಿಸಿದರು. ಆಂಗ್ಲ ಮಾಧ್ಯಮದ ಮುಖ್ಯಗುರು ನಾರಾಯಣ ಭಟ್ ಧನ್ಯವಾದ ಸಮರ್ಪಿಸಿದರು. ಕನ್ನಡ ಮಾಧ್ಯಮದ ಮುಖ್ಯಗುರು ವಿನಯ ವಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ನಂತರ ಶಾಲಾ ವಿದ್ಯಾರ್ಥಿಗಳಿಂದ ಸರಳ ಯೋಗಾಸನವನ್ನು ಯೋಗ ಶಿಕ್ಷಕಿ ಶಶಿಕಲಾರವರ ಮಾರ್ಗದರ್ಶನದೊಂದಿಗೆ ನಡೆಸಲಾಯಿತು. ರಾಜ್ಯ, ರಾಷ್ಟ್ರಮಟ್ಟದಲ್ಲಿ ಮಿಂಚಿದ ಶಾಲಾ ವಿದ್ಯಾರ್ಥಿಗಳು ಯೋಗ ಪ್ರದರ್ಶನವನ್ನು ನೀಡಿದರು. ತದ ನಂತರ ಶಾಲಾ ಶಿಕ್ಷಕವೃಂದದವರು ಯೋಗಾಸನ ಮಾಡುವ ಮೂಲಕ ವಿಶ್ವಯೋಗ ದಿನಾಚರಣೆಯನ್ನು ಆಚರಿಸಿದರು.
