ಉಪ್ಪಿನಂಗಡಿ: ಎಸ್‌ಡಿಪಿಐ ಸಂಸ್ಥಾಪನಾ ದಿನಾಚರಣೆ

0

ಉಪ್ಪಿನಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಪ್ಪಿನಂಗಡಿ ಬ್ಲಾಕ್ ಸಮಿತಿ ವತಿಯಿಂದ ಪಕ್ಷದ 17ನೇ ಸಂಸ್ಥಾಪನಾ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಮಠ ಮಸೀದಿ ಮುಂಭಾಗ ಸಫಾನಗರದಲ್ಲಿ ನಡೆಯಿತು.

ಧ್ವಜಾರೋಹಣವನ್ನು ಪಕ್ಷದ ರಾಜ್ಯ ಸಮಿತಿ ಸದಸ್ಯ ಅಡ್ವೊಕೇಟ್ ಅಶ್ರಫ್ ಅಗ್ನಾಡಿ ನೆರವೇರಿಸಿ, ಸಂದೇಶ ಭಾಷಣವನ್ನು ಮಾಡಿದರು. ಪುತ್ತೂರು ತಾಲೂಕು ಸಮಿತಿ ಸದಸ್ಯ ಅಬ್ದುಲ್ ರಝಕ್ ಸೀಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಡ್ವೊಕೇಟ್ ಅಬ್ದುಲ್ ರಹಿಮಾನ್ ಶುಭ ಕೋರಿದರು.


ಕಾರ್ಯಕ್ರಮದಲ್ಲಿ ಬ್ಲಾಕ್ ಅಧ್ಯಕ್ಷ ಮುಸ್ತಫಾ ಲತೀಫಿ, ಕಾರ್ಯದರ್ಶಿ ಶುಹೈಬ್, ಹಿರಿಯರಾದ ಹಾಜಿ ಅಬೂಬಕ್ಕರ್ ಮಠ, ಮಸೀದಿ ಕಾರ್ಯದರ್ಶಿ ಆಸೀಫ್ ಒ.ಎ., ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ರಶೀದ್ ಮಠ, ಮೈಸಿದಿ ಇಬ್ರಾಹಿಂ, ನೆಬಿಸಾ ಇಲ್ಯಾಸ್, ಸೌಧ ಮುಸ್ತಫಾ ಹಾಗೂ ಪಕ್ಷದ ನಾಯಕರು, ಕಾರ್ಯಕರ್ತರು, ಹಿತೈಷಿಗಳು ಉಪಸ್ಥಿತರಿದ್ದರು.
ಝಕಾರಿಯಾ ಸ್ಟಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರಶೀದ್ ಮಠ ವಂದಿಸಿದರು.

LEAVE A REPLY

Please enter your comment!
Please enter your name here