ವಿಟ್ಲ: ಹರಿದ್ವಾರದ ರಾಣಿಪುರ್ ಮಾಡ ಬಳಿಯ ಶ್ರೀ ಪ್ರೇಮ್ ನಗರ್ ಆಶ್ರಯದಲ್ಲಿ ಜೂ. 28ರಿಂದ ಜು. 1ರವರೆಗೆ ನಡೆಯಲಿರುವ 18ರ ವಯೋಮಿತಿಯ ಬಾಲಕರ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡಕ್ಕೆ ಮಹಮ್ಮದ್ ಶಾಹಿಲ್ ವಿಟ್ಲರವರು ಆಯ್ಕೆಯಾಗಿದ್ದಾರೆ.
ಇವರು ವಿಠಲ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ಕಲಾ ವಿಭಾಗದ ವಿದ್ಯಾರ್ಥಿಯಾಗಿದ್ದಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾಗಿರುವ ಶ್ರೀನಿವಾಸ್ ಗೌಡ ನೆಕ್ಕಿಲಾರ್ ರವರು ಇವರಿಗೆ ತರಬೇತಿ ನೀಡಿದ್ದಾರೆ.