ಉಪ್ಪಿನಂಗಡಿ ವೇದಶಂಕರ ನಗರ ಶ್ರೀರಾಮ ಶಾಲೆಯ ಶಾಲಾ ಪ್ರವೇಶೋತ್ಸವ

0

ಉಪ್ಪಿನಂಗಡಿ :ಉಪ್ಪಿನಂಗಡಿ ವೇದಶಂಕರ ನಗರ ಶ್ರೀರಾಮ ಶಾಲೆಯ ಶಾಲಾ ಪ್ರವೇಶೋತ್ಸವ ಕಾರ್ಯಕ್ರಮ‌ ಇತ್ತೀಚೆಗೆ ನಡೆಯಿತು.

ಹೊಸತಾಗಿ ಪ್ರವೇಶ ಪಡೆದ ಪುಟಾಣಿಗಳಿಗೆ ಆರತಿ ಬೆಳಗಿ,ತಿಲಕ ಧಾರಣೆ ಮಾಡಿ ಬರಮಾಡಿಕೊಳ್ಳಲಾಯಿತು.ಪುಟಾಣಿಗಳು ಅಗ್ನಿಹೋತ್ರಕ್ಕೆ ಘೃತಾಹುತಿ ಮಾಡಿ ಹಿರಿಯರ ಆಶೀರ್ವಾದ ಪಡೆದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಜೆ ಎನ್ ಯು ನವದೆಹಲಿಯ ಪ್ರಾಧ್ಯಾಪಕ ಡಾ. ರಮೇಶ್ ಸಾಲ್ಯಾನ್ ,ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಸುಧಾ ಎಸ್ ರಾವ್, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ವಿಭಾಗ ಸಂಯೋಜಕ ಸುಂದರ ಶೆಟ್ಟಿ ಎಂಜಿರಪಳಿಕೆ ,ಶಾಲಾ ಸಂಚಾಲಕ ಯು.ಜಿ ರಾಧಾ ,ಆಡಳಿತ ಮಂಡಳಿ ಅಧ್ಯಕ್ಷ ಸುನಿಲ್ ಅಣಾವು, ಕೋಶಾಧಿಕಾರಿ ಸುಧೀರ್ ಟಿ.ಎಸ್ ,ಸದಸ್ಯರಾದ ಜಯಂತ್ ಪೋರೋಳಿ,ಗುಣಾಕರ ಅಗ್ನಾಡಿ ಹಾಗೂ ಶಾಲಾ ಮುಖ್ಯಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಿರಣ್ಂದ್ರ ಪುಷ್ಪಗಿರಿ ಉದ್ಯಮಿಗಳು ಮಂಗಳೂರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವಲ್ಲಿ ಶ್ರೀರಾಮ ಶಾಲೆ ಮಹತ್ವದ ಪಾತ್ರ ವಹಿಸಿದೆ ಎಂದು ಹೇಳಿ , ಶುಭ ಹಾರೈಸಿದರು.

ರಮೇಶ್ ಸಾಲ್ಯಾನ್ ರವರು ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಕಷ್ಟದ ಬಗ್ಗೆ ತಿಳಿಸಿ ಕೊಡಬೇಕು ಎಂದು ತಮ್ಮ ಜೀವನಾನುಭವವನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ವಿದ್ಯಾ ಸಮೃದ್ಧಿ ಯೋಜನೆ ಯಿಂದ 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಬಡ ವಿದ್ಯಾರ್ಥಿನಿ ಶಿವಾನಿಗೆ ವಿದ್ಯಾನಿಧಿಯನ್ನು ನೀಡಲಾಯಿತು. ಸುಂದರ ಶೆಟ್ಟಿ ಎಂಜಿರಪಳಿಕೆ ಶಾಲೆಯ ವಿದ್ಯಾರ್ಥಿಗಳಿಗೆ ಭಾರತ ಭಾರತಿ ಪುಸ್ತಕವನ್ನು ಹಸ್ತಾಂತರಿಸಿದರು.

ಶಾಲಾ ಸಂಚಾಲಕ ಯು ಜಿ ರಾಧಾ ಶ್ರೀಮಾನ್ ರವರು ಸ್ವಾಗತಿಸಿ ,ಪ್ರಾಸ್ತಾವಿಕವಾಗಿ ಮಾತನಾಡಿದರು . ಪ್ರೌಢ ವಿಭಾಗದ ಮುಖ್ಯ ಗುರುಗಳು ವಂದಿಸಿ. ವಿಜಿತ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here