ಬಿಳಿನೆಲೆ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ ವಿಶ್ವ ಯೋಗ ದಿನ

0

ಕಡಬ: ಉತ್ತಮ ಆರೋಗ್ಯಕ್ಕಾಗಿ ಯೋಗ ಅತಿ ಮುಖ್ಯ ಎಂದು ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕರಾದ ಸುಬ್ರಹ್ಮಣ್ಯ ಇವರು ನುಡಿದರು. ಇವರು ಶ್ರೀ ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ (ರಿ)ಸುಬ್ರಹ್ಮಣ್ಯ ಇದರ ಆಡಳಿತಕ್ಕೊಳಪಟ್ಟ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಬಿಳಿನೆಲೆ ಇಲ್ಲಿ ವಿಶ್ವ ಯೋಗ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಯೋಗ ಮನಸ್ಸನ್ನು ನಿಯಂತ್ರಿಸುವ ಕೆಲಸವನ್ನು ಮಾಡುತ್ತಿದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆ ಎನ್ನುವುದು ಬಹಳ ಮುಖ್ಯ ಅದನ್ನು ಸಾಧಿಸಬೇಕಾದರೆ ಯೋಗ ವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬುದಾಗಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ಕೃಷ್ಣ ಶರ್ಮ ಇವರು ಯೋಗದ ಮಹತ್ವವನ್ನು ತಿಳಿಸಿಕೊಟ್ಟರು.


ವೇದಿಕೆಯಲ್ಲಿ ನಿವೃತ್ತ ಮುಖ್ಯ ಗುರುಗಳಾದ ಹಿರಿಯಣ್ಣ ಸರ್ ಉಪಸ್ಥಿತರಿದ್ದರು.ಬಳಿಕ ಬೇರೆ ಬೇರೆ ಆಸನಗಳನ್ನು ಮಾಡುವ ಮೂಲಕ ಯೋಗ ದಿನವನ್ನು ಆಚರಿಸಲಾಯಿತು.
ಮುಖ್ಯ ಗುರುಗಳಾದ ಸತ್ಯಶಂಕರ್ ಎಂ ಸ್ವಾಗತಿಸಿದರು. ಶಿಕ್ಷಕರಾದ ದಿನೇಶ್ ಕುಂದರ್ ವಂದಿಸಿದರು.ಶಿಕ್ಷಕ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here