ಇದು ಲೋಕಕ್ಕೆ ಕ್ಷೇಮವನ್ನು ಬಯಸುವ ಕಾರ್ಯಕ್ರಮವಾಗಿ ಮೂಡಿ ಬರಬೇಕು: ಒಡಿಯೂರು ಶ್ರೀ
ಸಂತರು ಸಮಾಜದ ಆಸ್ತಿ: ಶ್ರೀಕೃಷ್ಣ ಉಪಾಧ್ಯಾಯ
ವಿಟ್ಲ: ಬಾಲ ಭೋಜನದ ಮೂಲಕ ಮಕ್ಕಳಲ್ಲಿ ಪರಿವರ್ತನೆಯನ್ನು ಕಾಣಬಹುದಾಗಿದೆ. ಈಗಿನ ಕಾಲಘಟ್ಟದಲ್ಲಿ ಸಮಾಜದಲ್ಲಿ ಸಾಮರಸ್ಯದ ಬದುಕು ಕಟ್ಟಿಕೊಳ್ಳುವ ಅಗತ್ಯವಿದೆ. ದೇಶದ ಸಂಸ್ಕೃತಿ, ಪರಂಪರೆಯನ್ನು ಪ್ರೀತಿಸುವ ಜತೆಗೆ ಭಕ್ತಿ ಮಾರ್ಗವನ್ನು ಮಕ್ಕಳಿಗೆ ತೋರಿಸುವ ಕಾರ್ಯವಾಗಬೇಕು. ಕರ್ಮಗಳನ್ನು ಉತ್ತಮ ಮನಸ್ಸಿನಿಂದ ಮಾಡಬೇಕು. ಲೋಕಕ್ಕೆ ಕ್ಷೇಮವನ್ನು ಬಯಸುವ ಕಾರ್ಯಕ್ರಮವಾಗಿ ವರಮಹಾಲಕ್ಷ್ಮೀ ವ್ರತಾಚರಣೆ ಮೂಡಿ ಬರಬೇಕು ಎಂದು ಮಾಣಿಲ ಶ್ರೀದುರ್ಗಾಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಅಂಗವಾಗಿ 48 ದಿನಗಳ ಕಾಲ ನಡೆಯಲಿರುವ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯರವರು ಮಾತನಾಡಿ ಸಂತರು ಸಮಾಜದ ಆಸ್ತಿಯಾಗಿದ್ದು, ಅವರನ್ನು ಉಳಿಸಿಕೊಳ್ಳುವುದು ಆದ್ಯ ಕರ್ತವ್ಯವಾಗಿದೆ.
ದೃಢವಾದ ದೈವ ಭಕ್ತಿಯಿಂದ ಹಿಂದು ಉಳಿದಿದ್ದಾನೆ. ಸ್ವಾತಂತ್ರ್ಯ ಹೋರಾಟ ಪ್ರಾರಂಭವಾಗಿದ್ದು, ಹಿಂದು ಧಾರ್ಮಿಕ ಕೇಂದ್ರಗಳ ಮೂಲಕ ಎಂಬುದನ್ನು ತಿಳಿಯಬೇಕು. ದೇವರು ಇಷ್ಟಪಡುವ ರೀತಿಯಲ್ಲಿ ಬದುಕು ನಡೆಸಬೇಕು. ಸಂಸ್ಕಾರವಂತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರ ಪ್ರಯತ್ನ ಇರಬೇಕು ಎಂದರು.
ಇದೇ ಸಂದರ್ಭದಲ್ಲಿ ಶೈಕ್ಷಣಿಕ ಸಾಧನೆ ಮಾಡಿದ ಪೂಜಿತ್ ಕುಲಾಲ್ ರವರನ್ನು ಗೌರವಿಸಲಾಯಿತು.
ಉದ್ಯಮಿ ಚೌಡಾ ರೆಡ್ಡಿ ಬೆಂಗಳೂರು, ಮಹಾಲಕ್ಷ್ಮಿ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಮೋನಪ್ಪ ಭಂಡಾರಿ, ಮಹಾಲಕ್ಷ್ಮಿಯ ಮಹಿಳಾ ಸೇವಾ ಸಮಿತಿ ಗೌರವಾಧ್ಯಕ್ಷೆ ರೇವತಿ ಪೆರ್ನೆ, ಅಧ್ಯಕ್ಷೆ ವನಿತಾ ವಿ ಶೆಟ್ಟಿ, ಟ್ರಸ್ಟಿ ಮಚ್ಚೇಂದ್ರನಾಥ ಸಾಲ್ಯಾನ್, ಶ್ರೀಧಾಮ ಮಿತ್ರ ವೃಂದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ತಾರಾನಾಥ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು. ವ್ಯವಸ್ಥಾಪಕ ಸೋಮಪ್ಪ ಕೋಟ್ಯಾನ್, ವಿಠಲ ಶೆಟ್ಟಿ ಸುಣ್ಣಂಬಳ ಸಹಕರಿಸಿದರು.