ಪುತ್ತೂರು: ಮುಂಡೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 11ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶಾಲಾ ಎಸ್ ಡಿಎಂಸಿ ಸದಸ್ಯರೂ ಹಾಗೂ ಯೋಗ ಶಿಕ್ಷಕರು ಆಗಿರುವ ಅಶೋಕ್ ಅಂಬಟ ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಶಾಲಾ ಮುಖ್ಯ ಗುರು ವಿಜಯ ಪಿ ಅವರ ಮಾರ್ಗದರ್ಶನದಲ್ಲಿ ಆಯುಷ್ ಇಲಾಖೆಯ ಮಾರ್ಗಸೂಚಿಯಂತೆ ವಿದ್ಯಾರ್ಥಿಗಳಿಗೆ ಯೋಗಾಸನ ಹಾಗೂ ಪ್ರಾಣಾಯಾಮಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಮಾಡಿಸಿದರು. ಶಾಲಾ ಹಿರಿಯ ಶಿಕ್ಷಕರಾದ ರಾಮಚಂದ್ರ ಬಿ ಯೋಗದ ಮಹತ್ವವನ್ನು ತಿಳಿಸಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ವನಿತಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಶಿಕ್ಷಕರಾದ ಅಬ್ದುಲ್ ಬಶೀರ್ ವಂದಿಸಿದರು. ಶಾಲಾ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು
