ಉಪ್ಪಿನಂಗಡಿ: ಕೆಮ್ಮಾರ ಸರಕಾರಿ ಶಾಲೆಯಲ್ಲಿ ಪೂರ್ವ ಪ್ರಾಥಮಿಕ(LKG) ತರಗತಿಯು ಜೂ.19 ರಂದು ಆರಂಭಗೊಂಡಿದ್ದು, ಇದರ ಉದ್ಘಾಟನೆಯನ್ನು ದ್ವಾರಕಾ ಪ್ರತಿಷ್ಠಾನ ಸಂಸ್ಥೆಯ ಅಧ್ಯಕ್ಷ ಗೋಪಾಲಕೃಷ್ಣ ಭಟ್ ನೆರವೇರಿಸಿ ಮಾತನಾಡಿದ ಅವರು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಕೆಮ್ಮಾರ ಸರಕಾರಿ ಶಾಲೆಯು ಬೆಳೆಯುತ್ತಿರುವುದು ಪ್ರಶಂಸನೀಯ ಎಂದರು.

ಶಾಲಾ ಎಸ್ಡಿಎಂಸಿ ಸದಸ್ಯ ವಾಮನ ಬರಮೇಲು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು. ಹಿರೇಬಂಡಾಡಿ ಗ್ರಾಮ ಪಂಚಾಯತ್ ಸದಸ್ಯೆ ವಾರಿಜಾಕ್ಷಿ ಶಾಲೆಯ ಅಭಿವೃದ್ಧಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನಕರಾಜ್ ಶಾಲೆಯ ಪ್ರಗತಿಯನ್ನು ಶ್ಲಾಘಿಸಿ ಶುಭ ನುಡಿಗೈದರು. ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಜುನೈದ್ ಸಂದರ್ಭೋಚಿತವಾಗಿ ಮಾತನಾಡಿದರು.
ಎಸ್ಡಿಎಂಸಿ ವತಿಯಿಂದ ಗೋಪಾಲಕೃಷ್ಣ ಭಟ್ ಇವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಎಸ್ಡಿಎಂಸಿ ಉಪಾಧ್ಯಕ್ಷೆ ತೇಜಾವತಿ, ಸದಸ್ಯರಾದ ಪದ್ಮನಾಭ ಶೆಟ್ಟಿ ,ಯೋಗಿತಾ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಪುಟಾಣಿಗಳ ಪೋಷಕರು, ಹಿರಿಯ ವಿಧ್ಯಾರ್ಥಿಗಳು, ಎಲ್ಲಾ ಶಿಕ್ಷಕ ವೃಂದದವರು ಪಾಲ್ಗೊಂಡಿದ್ದರು.
ಶಾಲೆಯ ಮುಖ್ಯ ಗುರು ಜಯಶ್ರೀ ಎಂ ಸ್ವಾಗತಿಸಿ,LKG ಶಿಕ್ಷಕಿ ದಿವ್ಯಾ ವಂದಿಸಿದರು. ಶಿಕ್ಷಕಿ ಲೀನಾ ಲಸ್ರಾಡೊ ನಿರೂಪಿಸಿದರು.ಜಿಪಿಟಿ ಶಿಕ್ಷಕಿ ಶ್ರೀಮತಿ ಸಂಧ್ಯಾ ಸಹಕರಿಸಿದರು.