ಕಡಬ: ಇಲ್ಲಿನ ಸರಸ್ವತಿ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಜಂಟಿಯಾಗಿ ಜೂನ್ .21ರಂದು ವಿಶ್ವ ಯೋಗ ದಿನವನ್ನು ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸರಸ್ವತಿ ಆಂಗ್ಲ ಮಾಧ್ಯಮ ವಿಭಾಗದ ಅಧ್ಯಕ್ಷ ಸದಾಶಿವ ಭಟ್ ವಹಿಸಿ ಮಾನಸಿಕ ಆರೋಗ್ಯ ದೈಹಿಕ ಆರೋಗ್ಯವನ್ನು ವೃದ್ಧಿಸಲು ಯೋಗ ಅಗತ್ಯ ದಿನನಿತ್ಯ ಯೋಗ ಮಾಡಿ ಜೀವನಪೂರ್ತಿ ಸಂತೋಷದಿಂದ ಬಾಳಬಹುದು ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹರೀಶ್ ಜಿ ಯೋಗ ಶಿಕ್ಷಕರು ಐತೂರು ಭಾಗವಹಿಸಿ ಅಷ್ಟಾಂಗ ಯೋಗದ ಮಹತ್ವವನ್ನು ತಿಳಿಸಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಸರಸ್ವತಿ ವಿದ್ಯಾಲಯ ಕಡಬ ಇದರ ಆಡಳಿತ ಮಂಡಳಿ ಸದಸ್ಯರಾದ ಪುಲಸ್ತ್ಯ ರೈ ಮಾತನಾಡಿ ಜೀವನವನ್ನು ಸುಖಮಯವಾಗಿ ಕಳೆಯಬೇಕೆಂದರೆ ಯೋಗ ಮುಖ್ಯ ಎಂದು ನುಡಿದರು. ನಂತರ ವಿದ್ಯಾರ್ಥಿಗಳಿಂದ ಯೋಗ ಪ್ರಾತ್ಯಕ್ಷಿತೆ ನಡೆಸಲಾಯಿತು. ವೇದಿಕೆಯಲ್ಲಿ ಕನ್ನಡ ಮಾಧ್ಯಮದ ಸಂಚಾಲಕರಾದ ಸವಿತಾ ಶಿವ ಸುಬ್ರಮಣ್ಯ ಭಟ್ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯ ಗುರುಗಳಾದ ವಸಂತ ಕೆ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಪ್ರೌಢ ವಿಭಾಗದ ಮುಖ್ಯ ಗುರುಗಳಾದ ಶೈಲಶ್ರೀ ಎಸ್ ರೈ ಸ್ವಾಗತಿಸಿದ್ದರು. ಆಂಗ್ಲ ಮಾಧ್ಯಮ ವಿಭಾಗದ ಶಿಕ್ಷಕ ಚಂದನ್ ಕಾರ್ಯಕ್ರಮ ನಿರೂಪಿಸಿದರು.