ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಪುತ್ತೂರು: ಇಲ್ಲಿನ ಸೈಂಟ್ ಆಂಟನೀಸ್ ಪ್ರೌಢ ಶಾಲೆ ಹಾಗೂ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ನಲ್ಲಿ ಜಂಟಿಯಾಗಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.

ಸೈಂಟ್ ಆಂಟನೀಸ್ ಪ್ರೌಢ ಶಾಲೆಯ ಮುಖ್ಯಗುರು ಶ್ರೀಧರ ಗೌಡ ಮಾತನಾಡಿ ಯೋಗ ದೇಹ ,ಮನಸ್ಸನ್ನು ಶುದ್ಧ ಮಾಡುತ್ತದೆ‌.ದೇಹದ ಆರೋಗ್ಯವನ್ನು ಕಾಪಾಡಲು ಉತ್ತಮ ಆಹಾರವನ್ನು ಸೇವನೆ ಮಾಡಬೇಕು.ಮನಸ್ಸಿನ ಆರೋಗ್ಯವನ್ನು ಕಾಪಾಡಲು ನಡವಳಿಕೆ ಉತ್ತಮವಾಗಿರಬೇಕು.ದೇಹ ಮನಸ್ಸು ಆರೋಗ್ಯಪೂರ್ಣವಾಗಿದ್ದರೆ ಉತ್ತಮ‌ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ಸಂಸ್ಥೆಯ ದೈಹಿಕ ಶಿಕ್ಷಕರುಗಳಾದ ರಾಜೇಶ್ ರೈ ಹಾಗೂ ಜಿಮ್ಸನ್ ವರ್ಗೀಸ್ ವಿದ್ಯಾರ್ಥಿಗಳಿಗೆ ಯೋಗಾಸನದ ನಿರ್ದೇಶನ ನೀಡಿದರು.ಸಂಸ್ಥೆಯ ಸಂಚಾಲಕರಾದ ರೆ.ಫಾ ಹನಿ ಹನಿ ಜೇಕಬ್,‌ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಗುರು ಸಿಬಿಚ್ಚನ್ ಟಿ.ಸಿ ಹಾಗೂ ಎಲ್ಲಾ ಸಿಬ್ವಂದಿ ವರ್ಗ ,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here