ಬೆಟ್ಟಂಪಾಡಿ ನವೋದಯ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ

0

ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಬ್ಯಾಗ್, ಪುಸ್ತಕ, ಲೇಖನಿ ವಿತರಣೆ

ನಿಡ್ಪಳ್ಳಿ: ಬೆಟ್ಟಂಪಾಡಿ ನವೋದಯ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಪೆರ್ನಾಜೆ ಸೀತಾರಾಘವ ಪದವಿಪೂರ್ವ ಕಾಲೇಜಿನ ಪ್ರೌಢ ವಿಭಾಗದಿಂದ ವರ್ಗಾವಣೆ ಗೊಂಡು ಸಂಸ್ಥೆಗೆ ನಿಯೋಜನೆ ಗೊಂಡ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಪಿ ಇವರು ಯೋಗ ಕಾರ್ಯಕ್ರಮ ನಡೆಸಿ ಕೊಟ್ಟರು.

ಉಚಿತ ಬ್ಯಾಗ್ ಪುಸ್ತಕ ವಿತರಣೆ;
ಅಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ನೀಡಲ್ಪಟ್ಟ ಉಚಿತ ಬ್ಯಾಗ್, ಪುಸ್ತಕ ಹಾಗೂ ಲೇಖನಿ ಸಾಮಾಗ್ರಿಗಳನ್ನು ಟ್ರಸ್ಟ್ ನ ಪ್ರೊಜೆಕ್ಟ್ ಮೆನೇಜರ್ ಹೇಮಂತ್ ವಿತರಿಸಿದರು. ನವೋದಯ ವಿದ್ಯಾ ಸಮಿತಿ ಕಾರ್ಯದರ್ಶಿ ಚಂದ್ರಹಾಸ ಮುರೂರು ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ನವೋದಯ ವಿದ್ಯಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಭಟ್ ಘಾಟೆ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕ ಪುಷ್ಪರಾಜ್ ಶೆಟ್ಟಿ ಬೈಲಾಡಿ, ವಿದ್ಯಾ ಸಮಿತಿಯ ನಿಕಟಪೂರ್ವ ಕಾರ್ಯದರ್ಶಿ ಸಹಕಾರ ವನ ನಾರಾಯಣ ಭಟ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಗಣೇಶ್ ರೈ, ಉಪಾಧ್ಯಕ್ಷ ರಾಂ ಪ್ರಸಾದ್ ಉಪಸ್ಥಿತರಿದ್ದರು. ಉಚಿತ ಬ್ಯಾಗ್ ಪುಸ್ತಕ ಲೇಖನಿಗಳನ್ನು ವಿತರಿಸಿದ ಅಕಾಂಕ್ಷಾ ಟ್ರಸ್ಟ್ ಪ್ರೊಜೆಕ್ಟ್ ಮೆನೇಜರ್ ಹೇಮಂತ್ ರವರನ್ನು ಶಾಲು ಹೊದಿಸಿ ಫಲ ಪುಷ್ಪ ನೀಡಿ ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು. ಪ್ರೌಢಶಾಲೆಯಲ್ಲಿ ಹಿಂದೆ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ದಯಾನಂದ ರೈ ಕೋರ್ಮಂಡರವರು ನಿವೃತ್ತಿ ಹೊಂದಿದ ನಂತರ ತೆರವಾಗಿದ್ದ ದೈಹಿಕ ಶಿಕ್ಷಣ ಶಿಕ್ಷಕ ಹುದ್ದೆಗೆ ಪೆರ್ನಾಜೆ ಸೀತಾರಾಘವ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಿಂದ ವರ್ಗಾವಣೆ ಗೊಂಡು ನಿಯೋಜನೆ ಗೊಂಡ ದೈಹಿಕ ಶಿಕ್ಷಕ ಬಾಲಕೃಷ್ಣ. ಪಿ ಇವರನ್ನು ಗೌರವಿಸಲಾಯಿತು.

ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಮುಖ್ಯ ಗುರು ಪುಷ್ಪಾವತಿ.ಎಸ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಶಿಕ್ಷಕಿ ಸುಮಂಗಲಾ.ಕೆ ಅಭಿನಂದನಾ ನುಡಿ ನುಡಿದರು.

ಸಂಸ್ಕೃತ ಶಿಕ್ಷಕಿ ಶೋಭಾ ಪಿ ವಂದಿಸಿ, ಶಿಕ್ಷಕ ರಾಧಾಕೃಷ್ಣ ಕೋಡಿ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕರಾದ ಭುವನೇಶ್ವರಿ, ಗೌತಮಿ, ಕ್ಲಾರ್ಕ್ ನಾರಾಯಣ ಬನ್ನಿಂತಾಯ ಸಹಕರಿಸಿದರು. ವಿದ್ಯಾರ್ಥಿಗಳು, ಪೋಷಕರು ಪಾಲ್ಗೊಂಡರು.

LEAVE A REPLY

Please enter your comment!
Please enter your name here