ಕೃಷಿಕ ಆನ ಶಿವಣ್ಣ ಗೌಡ ಹೃದಯಾಘಾತದಿಂದ ನಿಧನ

0

ರಾಮಕುಂಜ: ಗ್ರಾಮದ ಆನ ನಿವಾಸಿ, ಕೃಷಿಕ ಶಿವಣ್ಣ ಗೌಡ(61ವ.)ರವರು ಜೂ.22ರಂದು ಮುಂಜಾನೆ ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.


ಶಿವಣ್ಣ ಗೌಡ ಅವರಿಗೆ ಜೂ.21ರಂದು ಎದೆನೋವು ಕಾಣಿಸಿಕೊಂಡಿದ್ದು ಮನೆಯವರು ಪುತ್ತೂರಿನ ಆಸ್ಪತ್ರೆಯೊಂದಕ್ಕೆ ಕರೆತಂದು ವೈದ್ಯರ ಸಲಹೆಯಂತೆ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದರು. ಅಲ್ಲಿ ಜೂ.22ರಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ.

ಶಿವಣ್ಣ ಗೌಡ ಅವರು ಸುಮಾರು 35ವರ್ಷ ಮಂಗಳೂರಿನ ’ಹನುಮಾನ್’ ಕಂಪನಿಯ ಖಾಸಗಿ ಬಸ್‌ನಲ್ಲಿ ನಿರ್ವಾಹಕರಾಗಿ ಕೆಲಸ ಮಾಡಿದ್ದರು. ಇತ್ತೀಚಿನ ಕೆಲ ಸಮಯದಿಂದ ಅವರು ಕೃಷಿಯಲ್ಲಿ ತೊಡಗಿಕೊಂಡಿದ್ದರು.
ಮೃತರು ಪತ್ನಿ ಗುಲಾಬಿ, ಪುತ್ರಿಯರಾದ ಲಿಖಿತ, ಗ್ರೀಷ್ಮಾ, ಮೂವರು ಸಹೋದರರು ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಮೃತರ ಮನೆಗೆ ಹಲವು ಗಣ್ಯರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here