ಪುತ್ತೂರು: ಅಂತರರಾಷ್ಟ್ರೀಯ ಯೋಗ ದಿನದ ಪ್ರಯುಕ್ತ, ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಸುಪ್ರೀತ್ ಕೆ ಸಿ ಅವರು ಮಾತನಾಡಿ, “ಯೋಗ ಎಂಬುದು ಕೇವಲ ವ್ಯಾಯಾಮವಲ್ಲ; ಅದು ಶಾರೀರಿಕ ಹಾಗೂ ಮಾನಸಿಕ ಶುದ್ಧತೆಯ ದಾರಿ. ವಿದ್ಯಾರ್ಥಿಗಳಲ್ಲಿ ಶಿಸ್ತು, ಏಕಾಗ್ರತೆ ಮತ್ತು ಆತ್ಮವಿಶ್ವಾಸ ಬೆಳೆಸಲು ಯೋಗ ಬಹುಮುಖ್ಯ,” ಎಂದು ಹೇಳಿದರು. ಈ ದಿನಾಚರಣೆಯಲ್ಲಿ ವಿದ್ಯಾರ್ಥಿಗಳು ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಪಾಲ್ಗೊಂಡು ವಿವಿಧ ಯೋಗಾಸನಗಳನ್ನು ಅಭ್ಯಾಸ ಮಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ನಿಕೋಲಸ್, ಅನಿಖಾ,ಅಚಿಂತ್ಯರವರು ಪ್ರಾಥಮಿಕ ಯೋಗಾಸನಗಳ ಪ್ರದರ್ಶನ, ಪ್ರಾಣಾಯಾಮ, ಧ್ಯಾನ ಹಾಗೂ ಯೋಗದ ಮಹತ್ವದ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ಪರಿಚಯಿಸಿದರು.
ರಸಾಯನ ಶಾಸ್ತ್ರಉಪನ್ಯಾಸಕಿ ರಚನಾ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಭೌತಶಾಸ್ತ್ರ ಉಪನ್ಯಾಸಕಿ ನವ್ಯಾ ವಂದಿಸಿದರು.