ಪುತ್ತೂರು: ಇನ್ನರ್ ವೀಲ್ ಕ್ಲಬ್ ಪುತ್ತೂರು ಮತ್ತು ಆಯುಷ್ ಫೆಡರೇಶನ್ ಆಫ್ ಇಂಡಿಯಾ ಕರ್ನಾಟಕ, ಪುತ್ತೂರು ಬ್ರಾಂಚ್ ಇದರ ಜಂಟಿ ಆಶ್ರಯದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜು ಹಂಸಧ್ವನಿ ವೇದಿಕೆಯಲ್ಲಿ ಜೂ.21ರಂದು ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಗೌರಿ ಶ್ಯಾಮ್ ಭಾಗವಹಿಸಿ ಯೋಗದ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ಕೊಟ್ಟು ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಹರಿಕೃಷ್ಣ ಪಾಣಾಜೆ ಅವರು ನಮ್ಮ ಉತ್ತಮ ಜೀವನಕ್ಕೆ ಯೋಗ ಅತೀ ಅವಶ್ಯ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಡಾ.ಮುರಳಿ ಕೃಷ್ಣ ರೈ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.
ಕೃಷ್ಣವೇಣಿ ಮುಳಿಯ ಪ್ರಾರ್ಥಿಸಿದರು. ಇನ್ನರ್ ವೀಲ್ ಸಂಸ್ಥೆಯ ನಿಯೋಜಿತ ಅಧ್ಯಕ್ಷೆ ರೂಪಲೇಖ ಸ್ವಾಗತಿಸಿದರು. ಸಂಧ್ಯಾ ಸಾಯ ವಂದಿಸಿದರು. ಸೀಮಾ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.