ರಾಮಕುಂಜ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಕೊೖಲ ಗ್ರಾ.ಪಂ.ಕಚೇರಿ ಮುಂಭಾಗ ಜೂ.23ರಂದು ಬೆಳಿಗ್ಗೆ ಪ್ರತಿಭಟನೆ ನಡೆಸಲಾಯಿತು.

ದ.ಕ.ಜಿ.ಪಂ.ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಅವರು ಮಾತನಾಡಿ, ರಾಜ್ಯ ಸರಕಾರದ ಆಡಳಿತ ವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಮುಖಂಡರಾದ ರಾಮಚಂದ್ರ ನಾಯ್ಕ್ ಏಣಿತ್ತಡ್ಕ, ಪ್ರಕಾಶ್ ಕೆಮ್ಮಾರ, ಉಮೇಶ್ ಸಂಕೇಶ, ಯದುಶ್ರೀ ಆನೆಗುಂಡಿ, ಶೀನಪ್ಪ ಗೌಡ ವಳಕಡಮ, ಸುಧೀಶ್ ಪಟ್ಟೆ, ಗ್ರಾ.ಪಂ.ಅಧ್ಯಕ್ಷೆ ಪುಷ್ಪಾಸುಭಾಷ್ ಶೆಟ್ಟಿ, ಉಪಾಧ್ಯಕ್ಷ ಯತೀಶ್ ಹಾಗೂ ಸದಸ್ಯರು, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.