ಪೆರಾಬೆ ಗ್ರಾ.ಪಂ.ಸಾಮಾನ್ಯ ಸಭೆ – ಹೆದ್ದಾರಿ ಬದಿ ಸೂಚನಾ ಫಲಕ ಅಳವಡಿಸುವಂತೆ ಪಿಡಬ್ಲ್ಯುಡಿ ಇಲಾಖೆಗೆ ಮನವಿಗೆ ನಿರ್ಣಯ

0

ಪೆರಾಬೆ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿ ಸಂಚಾರಿ ನಿಯಮಗಳ ಬಗ್ಗೆ ಸೂಚನಾ ಫಲಕ ಅಳವಡಿಸುವಂತೆ ಲೋಕೋಪಯೋಗಿ ಇಲಾಖೆಗೆ ಮನವಿ ಮಾಡಲು ಪೆರಾಬೆ ಗ್ರಾ.ಪಂ.ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.


ಸಭೆ ಗ್ರಾ.ಪಂ.ಅಧ್ಯಕ್ಷೆ ಸಂಧ್ಯಾ ಕೆ.ಅವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕಾಮಗಾರಿ ಮಾಡಿ ತೆಗೆದು ಹಾಕಿದ ಮಣ್ಣನ್ನು ತೆರವುಗೊಳಿಸಿಲ್ಲ. ಇದನ್ನು ತೆರವುಗೊಳಿಸುವಂತೆಯೂ ಇಲಾಖೆಗೆ ಮನವಿ ಮಾಡಲು ನಿರ್ಣಯ ಕೈಗೊಳ್ಳಲಾಯಿತು.


ಉಳಿದಂತೆ ವಿವಿಧ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಸಾರ್ವಜನಿಕ ಅರ್ಜಿ, ಸರಕಾರಿ ಸುತ್ತೋಲೆಗಳನ್ನು ಸಭೆಗೆ ಮಂಡಿಸಿ ಚರ್ಚಿಸಲಾಯಿತು. ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಬಿ.ಕೆ.ಕುಮಾರ, ಸದಾನಂದ ಕುಂಟ್ಯಾನ, ಪಿ.ಜಿ ರಾಜು, ಫಯಾಝ್ ಸಿ.ಎಂ., ಮೋಹಿನಿ, ಮಮತ, ಕಾವೇರಿ, ಲೀಲಾವತಿ, ಮೇನ್ಸಿ, ಮೋಹನ್‌ದಾಸ್ ರೈ ಉಪಸ್ಥಿತರಿದ್ದು ವಿವಿಧ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದರು. ಪಿಡಿಒ ಶಾಲಿನಿ ಕೆ.ಬಿ.,ಸ್ವಾಗತಿಸಿ, ಲೆಕ್ಕಪತ್ರ ಮಂಡಿಸಿದರು. ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here