ಪುತ್ತೂರು: “ಮನಸ್ಸಿನ ಏಕಾಗ್ರತೆ ಮತ್ತು ದೈಹಿಕ ಸಮತೋಲನಕ್ಕೆ ಯೋಗಾಭ್ಯಾಸವನ್ನು ರೂಢಿಸಿಕೊಳ್ಳಬೇಕು. ಇದರಿಂದ ಸ್ವಾಸ್ಥ್ಯ ಸಮಾಜವು ರೂಪುಗೊಳ್ಳಲು ಸಾಧ್ಯ” ಎಂದು ಆರ್ಟ್ ಆಫ್ ಲಿವಿಂಗ್ ಪುತ್ತೂರು, ಇದರ ಯೊಗಶಿಕ್ಷಕಿ ವಿದ್ಯಾಕೃಷ್ಣರಾಜ್ ಅಭಿಪ್ರಾಯಪಟ್ಟರು. ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪುತ್ತೂರಿನ ಸುದಾನ ವಸತಿ ಶಾಲೆಯಲ್ಲಿ ದೀಪೋಜ್ವಲನವನ್ನು ಮಾಡಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುನಾಡಿದರು.

ಸಭಾಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಉಪ ಮುಖ್ಯಶಿಕ್ಷಕಿ ಲವೀನಾ ನವೀನ್ ಹನ್ಸ್ ಯೋಗದ ಮಹತ್ವವನ್ನು ವಿವರಿಸಿ ನಿತ್ಯ ಜೀವನದಲ್ಲಿ ಯೋಗಾಭ್ಯಾಸವನ್ನು ಅಳವಡಿಸಿಕೊಳ್ಳುವಂತೆ ಕರೆನೀಡಿದರು. ವಿಶೇಷ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸದಸ್ಯೆ ಮತ್ತು ಆಪ್ತಸಮಾಲೋಚಕಿ ಪ್ರೀತಿ ಶೆಣೈ ಯೋಗದಿಂದ ಸಶಕ್ತ ವ್ಯಕ್ತಿತ್ವ ನಿರ್ಮಾಣವು ಸಾಧ್ಯ.ವಿದ್ಯಾರ್ಥಿಗಳ ಹೆತ್ತವರು ಕೂಡಾ ಯೋಗಭ್ಯಾಸವನ್ನು ಪ್ರತಿನಿತ್ಯ ಮಾಡಬೇಕೆಂದರು.

ಶಾಲೆಯ ವಿದ್ಯಾರ್ಥಿಗಳು ಯೋಗ ತರಬೇತಿದಾರರ ಮಾರ್ಗದರ್ಶನದಲ್ಲಿ ಯೋಗಾಸನವನ್ನು ಮಾಡಿದರು. ಶಾಲಾ ದೈಹಿಕ ಶಿಕ್ಷಕಿ ಲೀಲಾವತಿ ಸ್ವಾಗತಿಸಿ, ದೈಹಿಕ ಶಿಕ್ಷಕರಾದ ಪುಷ್ಪರಾಜ್ ಕಾರ್ಯಕ್ರಮವನ್ನು ನಿರೂಪಿಸಿದರು. ದೈಹಿಕ ಶಿಕ್ಷಕರಾದ ಜೀವಿತಾ ರೈ ಮತ್ತು ನವೀನ್ ಸಹಕರಿಸಿದರು. ಶಾಲೆಯ ಶಕ್ತಿ ಸ್ಪೋರ್ಟ್ಸ್ ಕ್ಲಬ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.