ಪುತ್ತೂರು: ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಬೆಟ್ಟಂಪಾಡಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ರಾಜ್ಯ ಎಸ್.ಟಿ ಮೋರ್ಚಾ ಮಾಜಿ ಉಪಾಧ್ಯಕ್ಷ ಮಾತನಾಡಿ ಮಂಜುನಾಥ್ ಎನ್.ಎಸ್. ಮಾತನಾಡಿ ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿದರು.

ಮನವಿ:
ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಜನಸಾಮಾನ್ಯರಿಗೆ ನೀಡುತ್ತಿರುವ ಸರಕಾರಿ ಸೇವೆಗಳನ್ನು ಕಠಿಣಗೊಳಿಸಿರುವುದನ್ನು ತಕ್ಷಣದಿಂದಲೇ ಕೈ ಬಿಡುವಂತೆ ಸರಕಾರವನ್ನು ಒತ್ತಾಯಿಸಿ ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರಿಂದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ಕರ್ನಾಟಕ ರಾಜ್ಯಪಾಲರಿಗೆ ಮನವಿ ನೀಡಲಾಯಿತು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಬೆಟ್ಟಂಪಾಡಿ ಗ್ರಾಮ ಪಂಚಯತ್ ಅಧ್ಯಕ್ಷೆ ವಿದ್ಯಾಶ್ರೀ, ಉಪಾಧ್ಯಕ್ಷ ಮಹೇಶ್ ಕೋರ್ಮಂಡ, ಸದಸ್ಯರಾದ ಪ್ರಕಾಶ್ ರೈ ಬೈಲಾಡಿ, ಚಂದ್ರಶೇಖರ್ ರೈ ಬಾಲ್ಯೊಟ್ಟು, ಗಂಗಾಧರ ಮಿತ್ತಡ್ಕ, ರಮ್ಯ ಪಾರ, ಬೇಬಿ ದೂಮಡ್ಕ, ಲಲಿತಾ ಗೋಳಿಪದವು, ಮಾಜಿ ಅಧ್ಯಕ್ಷ ಸುಂದರ ನಾಯಕ್ ಬಾಳೆಗುಳಿ, ಮಾಜಿ ಸದಸ್ಯ ರಕ್ಷಣ್ ರೈ, ಬೆಟ್ಟಂಪಾಡಿ, ಬೂತ್ ಪದಾಧಿಕಾರಿಗಳಾದ ಉಚಿತ್ ಕುಮಾರ್ ಬದಿನಾರು, ಪ್ರಭಾಕರ ರೈ ಬಾಜುವಳ್ಳಿ, ಜಯಪ್ರಕಾಶ್ ಬಳ್ಳಾಲ್, ಮೋಹನ್ ರಾವ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸಂದೀಪ್ ರೈ ಬಾಜುವಳ್ಳಿ ಸ್ವಾಗತಿಸಿ ಮಾಜಿ ಅಧ್ಯಕ್ಷ ಜಗನ್ನಾಥ ರೈ ಕೊಮ್ಮಂಡ ವಂದಿಸಿದರು.