ನಿಡ್ಪಳ್ಳಿ: ಕರ್ನಾಟಕ ರಾಜ್ಯ ಸರಕಾರದ ಜನ ವಿರೋಧಿ ನೀತಿ ಮತ್ತು ಭ್ರಷ್ಟಾಚಾರ ಖಂಡಿಸಿ ನಿಡ್ಪಳ್ಳಿ ಗ್ರಾಮದ ಬಿ.ಜೆ.ಪಿ ಶಕ್ತಿ ಕೇಂದ್ರದ ವತಿಯಿಂದ ನಿಡ್ಪಳ್ಳಿ ಗ್ರಾಮ ಪಂಚಾಯತ್ ಎದುರು ಜೂ.23 ರಂದು ಪ್ರತಿಭಟನೆ ನಡೆಯಿತು.
ಪುತ್ತೂರು ಬಿ.ಜೆ.ಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಕುಮಾರ ನರಸಿಂಹ ಭಟ್ ಹಾಗೂ ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ ರಾಜ್ಯ ಸರಕಾರದ ಜನ ವಿರೋಧಿ ನೀತಿ ಮತ್ತು ಬಡವರ ಸೌಲಭ್ಯಗಳನ್ನು ತಡೆಹಿಡಿದು ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿದರು.ನಂತರ ಕಾಂಗ್ರೆಸ್ ಸರಕಾರ ಜನಸಾಮಾನ್ಯರಿಗೆ ನೀಡುವ ಸವಲತ್ತುಗಳನ್ನು ಕಠಿಣಗೊಳಿಸಿರುವುದನ್ನು ತಕ್ಷಣ ಕೈ ಬಿಡುವಂತೆ ಒತ್ತಾಯಿಸಿ ಪಂಚಾಯತ್ ಪಿಡಿಒ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಲಾಯಿತು.
ಪ್ರತಿಭಟನೆಯ ಮೊದಲು ಡಾ.ಶ್ಯಾಂ ಪ್ರಸಾದ್ ಮುಖರ್ಜಿಯವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜನ್ಮ ದಿನಾಚರಣೆ ಆಚರಿಸಲಾಯಿತು. ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್, ಬಿ.ಜೆ.ಪಿ ಪಕ್ಷದ ಬೂತ್ ಅಧ್ಯಕ್ಷ ಪ್ರಕಾಶ್ ಬೋರ್ಕರ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ರಾಧಾಕೃಷ್ಣ ರೈ ಪಟ್ಟೆ, ಚಂದ್ರಕಲಾ ಆಚಾರ್ಯ ಹಾಗೂ ಪಕ್ಷದ ಹಲವಾರು ಕಾರ್ಯಕರ್ತರು ಪಾಲ್ಗೊಂಡರು.ಬಿ.ಜೆ.ಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ್ ಕುಮಾರ್ ಬೇರಿಕೆ ಸ್ವಾಗತಿಸಿದರು.