ಬಜತ್ತೂರು: ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

0

ನೆಲ್ಯಾಡಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಜೂ.23ರಂದು ಬೆಳಿಗ್ಗೆ ಬಜತ್ತೂರು ಗ್ರಾ.ಪಂ.ಮುಂಭಾಗದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.


ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುನಿಲ್ ದಡ್ಡು, ಬಜತ್ತೂರು ಗ್ರಾ.ಪಂ.ಅಧ್ಯಕ್ಷ ಗಂಗಾಧರ ಪಿ.ಎನ್.ನೆಕ್ಕರಾಜೆ, ಮಾಜಿ ಅಧ್ಯಕ್ಷ ಯಶವಂತ ಗುಂಡ್ಯ ಅವರು ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ನಡೆಸುತ್ತಿರುವ ನೀತಿಯಿಂದಾಗಿ ಸಾಮಾನ್ಯ ಜನರು ಬದುಕುವುದೇ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿ ಸರಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.


ಬಳಿಕ ರಾಜ್ಯ ಸರಕಾರದ ವಿರುದ್ಧ ಗ್ರಾ.ಪಂ.ಪಿಡಿಒ ಅವರ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಲಾಯಿತು. ಗ್ರಾ.ಪಂ.ಸದಸ್ಯ ಸಂತೋಷ್ ಪಂರ್ದಾಜೆ ಮನವಿ ಪತ್ರ ವಾಚಿಸಿದರು.
ಗ್ರಾ.ಪಂ.ಮಾಜಿ ಅಧ್ಯಕ್ಷೆ ಪ್ರೇಮಾ, ಶಕ್ತಿ ಕೇಂದ್ರದ ಅಧ್ಯಕ್ಷ ಆನಂದ ಮೇಲೂರು, ಗ್ರಾ.ಪಂ.ಉಪಾಧ್ಯಕ್ಷೆ ವಿಮಲ ಬೆದ್ರೋಡಿ, ಸದಸ್ಯರಾದ ಸ್ಮಿತಾ ಪುಯಿಲ, ಗಂಗಾಧರ ಕೆ.ಎಸ್., ಉಮೇಶ್ ಓಡ್ರಪಾಲು, ಮಾಧವ ಒರುಂಬೋಡಿ, ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು. ವಸಂತ ಪಿಜಕ್ಕಳ ಸ್ವಾಗತಿಸಿದರು.

LEAVE A REPLY

Please enter your comment!
Please enter your name here