ಪುತ್ತೂರು: ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ಜಲಕೃಷಿ ವಿಭಾಗದ ವಿದ್ಯಾರ್ಥಿನಿ ಶಿವಾನಿ ಡಿ ಗೌಡ ಅವರಿಗೆ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ ಡಾಕ್ಟರೇಟ್ ಪದವಿ ನೀಡಿದೆ.
ಹಿರಿಯ ಪ್ರಾಧ್ಯಾಪಕ ಹಾಗೂ ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ಜಲಕೃಷಿ ವಿಭಾಗದ ಮುಖ್ಯಸ್ಥರಾದ ಡಾ. ಗಣಪತಿ ನಾಯ್ಕ ಎಂ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ”Effect of dietary watermelon (Citrullus lanatus) and _Bacillus amyloliquefaciens on growth performance, immune response, disease resistance, hematology and gut histology of Amur common carp (Cyprinus carpio haematopterus)“ಎಂಬ ಸಂಶೋಧನ ಮಹಾಪ್ರಬಂಧಕ್ಕೆ ಈ ಗೌರವ ಸಂದಿದೆ.
ಇವರು ಸುದಾನ ವಸತಿಯುತ ಶಾಲೆ ಹಾಗೂ ಅಂಬಿಕಾ ಪದವಿ ಪೂರ್ವ ವಿದ್ಯಾಸಂಸ್ಧೆಯ ಹಳೆ ವಿದ್ಯಾರ್ಥಿನಿಯಾಗಿದ್ದು, ಕಲ್ಲೇಗ ನಿವಾಸಿ ಟಿ.ಡಿ ಗೌಡ ಮತ್ತು ಮೀನಾಕ್ಷಿ ಡಿ ಗೌಡರವರ ಪುತ್ರಿ.