ಸವಣೂರು : ಶತಮಾನೋತ್ಸವದ ಹೊಸ್ತಿಲಲ್ಲಿರುವ ಪುಣ್ಚಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವ ಸರಣಿ ಕಾರ್ಯಕ್ರಮದಡಿಯಲ್ಲಿ ಶತಮಾನೋತ್ಸವ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ, ಶತಮಾನೋತ್ಸವ ಸಮಿತಿ, ಇವರ ನೇತೃತ್ವದಲ್ಲಿ, ಕೆ ವಿ ಜಿ ದಂತ ಮಹಾ ವಿದ್ಯಾಲಯ ಸುಳ್ಯ ಸಹಯೋಗದಲ್ಲಿ ಸಮರ್ಥ ಜನಸೇವಾ ಟ್ರಸ್ಟ್ ಪುಣ್ಚಪ್ಪಾಡಿ, ಸೇವಾ ಭಾರತಿ ಸವಣೂರು ಇವರ ಸಹಕಾರದೊಂದಿಗೆ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು.
ಕೆ ವಿ ಜಿ ದಂತ ಮಹಾ ವಿದ್ಯಾಲಯದ ವೈದ್ಯಾಧಿಕಾರಿ ಡಾ.ಸುಮಂತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಈ ಶಾಲೆಯು ದಂತ ಚಿಕಿತ್ಸಾ ಶಿಬಿರದ ಮೂಲಕ ಸಮಾಜದ ಒಳಿತಿಗಾಗಿ ಪ್ರಯತ್ನಿಸಿರುವುದು ಶ್ಲಾಘನೀಯ ಎಂದರು.
ಸುಳ್ಯ ಕೆ.ವಿ.ಜಿ. ಮಹಾವಿದ್ಯಾಲಯದ ಸಮುದಾಯ ಅಭಿವೃದ್ಧಿ ಅಧಿಕಾರಿ ಜಯಂತ್ ಮಾತನಾಡಿ ಪುಣ್ಚಪ್ಪಾಡಿ ಶಾಲೆಯು ಶತಮಾನೋತ್ಸವದ ನೆನಪಿನಲ್ಲಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಅರ್ಥಪೂರ್ಣ. ದಂತ ಚಿಕಿತ್ಸಾ ಶಿಬಿರವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಡಾ. ಅನಘ ಇವರು ದಂತ ಸಮಸ್ಯೆ ಹಾಗೂ ಚಿಕಿತ್ಸೆ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು. ಎಸ್. ಡಿ.ಎಂ.ಸಿ ಸದಸ್ಯರಾದ ಸುಹಾಸ್ ಕಾರಂತ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮ ಆಯೋಜಕರಾದ ಸವಣೂರು ಗ್ರಾಮ ಪಂಚಾಯತ್ ಸದಸ್ಯರಾದ ಗಿರಿಶಂಕರ ಸುಲಾಯ, ಬಾಬು ಜರಿನಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯ ಗುರು ರಶ್ಮಿತಾ ನರಿಮೊಗರು ಸ್ವಾಗತಿಸಿ ನಿರೂಪಿಸಿದರು. ಪದವೀಧರ ಶಿಕ್ಷಕಿ ಶೋಭಾ ವಂದಿಸಿದರು.
ದಂತ ಕುಳಿ ತುಂಬುವಿಕೆ, ಹಲ್ಲಿನ ಸ್ವಚ್ಛತೆ, ಹಲ್ಲು ಕೀಳುವುದು, ಹಲ್ಲಿನ ಜೋಡಣೆ ಮುಂತಾದ ಚಿಕಿತ್ಸೆಯನ್ನು ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರಿನವರು ಉಚಿತವಾಗಿ ಪಡೆದುಕೊಂಡರು.