
ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ನೆಟ್ಟಣಿಗೆ ಮುಡ್ನೂರು ಮಹಾಶಕ್ತಿಕೇಂದ್ರ ಒಳಮೊಗ್ರು ಶಕ್ತಿಕೇಂದ್ರದ ವತಿಯಿಂದ ಜನಸಂಘದ ಸ್ಥಾಪಕರಾದ ಡಾ|| ಶ್ಯಾಮ್ ಪ್ರಸಾದ್ ಮುಖರ್ಜಿರವರ ಬಲಿದಾನವಾದ ದಿನದ ಅಂಗವಾಗಿ “ಬಲಿದಾನ್ ದಿವಸ್” ಕಾರ್ಯಕ್ರಮ ಆಚರಿಸಲಾಯಿತು. ಶ್ಯಾಮ್ಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿಯ ಜಿಲ್ಲಾ ಮಾಜಿ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ , ನೆಟ್ಟಣಿಗೆ ಮುಡ್ನೂರು ಮಹಾಶಕ್ತಿಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ, ಹಿರಿಯರಾದ ಸುಧಾಕರ ರೈ ಕುಂಬ್ರ , ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಹಾಗೂ ಸದಸ್ಯರುಗಳು, ಸಹಕಾರಿ ಸಂಘದ ನಿರ್ದೇಶಕರು , ಬೂತ್ ಸಮಿತಿಯ ಅಧ್ಯಕ್ಷ , ಕಾರ್ಯದರ್ಶಿಗಳು , ಪಕ್ಷದ ವಿವಿಧ ಜವಾಬ್ದಾರಿ ಹೊತ್ತ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.